2024 ರ ಸಾರ್ವತ್ರಿಕ ಚುನಾವಣೆಗೂ ಮೊದಲು ಎಲ್ಲಾ ರಾಜ್ಯಗಳಲ್ಲಿ ಎನ್ಐಎ ಶಾಖೆ – ಅಮಿತ್ ಶಾ

ನವದೆಹಲಿ: 2024 ರ ಸಾರ್ವತ್ರಿಕ ಚುನಾವಣೆಗೂ ಮೊದಲು ಎಲ್ಲಾ ರಾಜ್ಯಗಳಲ್ಲಿ ಎನ್ಐಎ ತನ್ನ ಶಾಖೆಗಳನ್ನು ಹೊಂದಿರುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಶನಿವಾರ ರಾಷ್ಟ್ರೀಯ ತನಿಖಾ ಸಂಸ್ಥೆಯ ರಾಯಪುರ ಶಾಖಾ ಕಚೇರಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಎನ್ಐಎ ಈಗ ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಮುಖ ತನಿಖಾ ಸಂಸ್ಥೆಯಾಗಿ ಗುರುತಿಸಲ್ಪಟ್ಟಿದೆ. ಅಲ್ಪ ಕುಸಿತದ ನಂತರ, ಏಜೆನ್ಸಿಯು ತನ್ನ ಎಲ್ಲಾ ಗುರಿಗಳನ್ನು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಇನ್ನೂ ಗಡಿಯಾಚೆಗಿನ ಅಪರಾಧಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸುವುದು ರಾಜ್ಯಗಳು ಮತ್ತು ಕೇಂದ್ರದ ಸಾಮೂಹಿಕ ಜವಾಬ್ದಾರಿಯಾಗಿದೆ.

2019 ರ ನಂತರ ಜಮ್ಮು ಮತ್ತು ಕಾಶ್ಮೀರಕ್ಕೆ 57,000 ಕೋಟಿ ರೂ.ಗಳ ಹೂಡಿಕೆ ಬಂದಿದೆ. ಭಾರತದ ಬೆಳವಣಿಗೆಯಲ್ಲಿ ಅಡೆತಡೆಗಳನ್ನು ಸೃಷ್ಟಿಸುತ್ತಿದ್ದ ಎನ್ ಜಿ ಒಗಳ ವಿರುದ್ಧ ನಾವು ಬಲವಾದ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಎನ್ ಜಿ ಒಗಳು ಅದರ ದುರುಪಯೋಗವನ್ನು ತಡೆಯಲು ನಾವು ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆಗೆ ತಿದ್ದುಪಡಿ ಮಾಡಿದ್ದೇವೆ ಎಂದು ಅಮಿತ್ ಶಾ ಹೇಳಿದರು.