ನ. 15 ರೊಳಗೆ ಬೆಂಗಳೂರಿನಲ್ಲಿರುವ ರಸ್ತೆ ಗುಂಡಿಗಳನ್ನು ಮುಚ್ಚಿ.! ಪಾಲಿಕೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ತುಷಾರ್ ಗಿರಿನಾಥ್.!

ಬೆಂಗಳೂರು: ನ. 15 ರೊಳಗೆ ಬೆಂಗಳೂರಿನಲ್ಲಿರುವ ರಸ್ತೆ ಗುಂಡಿಗಳನ್ನು ಮುಚ್ಚದಿದ್ದರೆ ಅಮಾನತು ಸೇರಿದಂತೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಪಾಲಿಕೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಬಿಬಿಎಂಪಿ ಕಚೇರಿಯಲ್ಲಿ ಮಾತನಾಡಿ, ಅಧಿಕಾರಿಗಳಿಗೆ ಎರಡು ಬಾರಿ ನೋಟಿಸ್ ನೀಡಲಾಗುವುದು. ಮೊದಲನೆಯ ನೋಟಿಸ್ ನಲ್ಲಿ ಎಚ್ಚರಿಕೆ ನೀಡುವುದು. ಎರಡನೆಯ ನೋಟಿಸ್ ನಲ್ಲಿ ಅಮಾನತು ಸೇರಿದಂತೆ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆಯುಕ್ತರು ಹೇಳಿದ್ದಾರೆ.

ಈ ಸಂಬಂಧ ಈಗಾಗಲೇ ಎಲ್ಲಾ ಇಂಜಿನಿಯರ್ ಗಳಿಗೂ ಕೆಲವು ನೋಟಿಸ್ ಗಳನ್ನು ನೀಡಲಾಗಿದೆ. ಅಧಿಕಾರಿಗಳು ಗಡುವಿನೊಳಗೆ ಗುಂಡಿಗಳನ್ನು ತುಂಬಲಾಗುವುದು ಎಂದು ಭರವಸೆ ನೀಡಿರುವುದಾಗಿ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.