ಗುಜರಾತ್ ತೂಗುಸೇತುವೆ ದುರಂತ: ನಾಳೆ ಘಟನಾ ಸ್ಥಳಕ್ಕೆ ಮೋದಿ ಭೇಟಿ

ಗುಜರಾತ್‌: ನಿನ್ನೆ ಸಂಜೆ ಮೊರ್ಬಿಯಲ್ಲಿ ನಡೆದ ತೂಗು ಸೇತುವ ದುರಂತ ನಡೆದ ಸ್ಥಳಕ್ಕೆ ನಾಳೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ಪ್ರಧಾನಿ ನಾಳೆಯ ಕೆಲ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದು ಘಟನಾ ಸ್ಥಳಕ್ಕೆ ಬೇಟಿ ನೀಡುತ್ತಿದ್ದಾರೆ. ಮೋದಿ ತವರು ರಾಜ್ಯದಲ್ಲಿ ಈ ಘಟನೆ ನಡೆದಿದೆ. ಹೀಗಾಗಿ ಪ್ರಕರಣಗಳನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ದುರ್ಘಟನೆಯಲ್ಲಿ 140 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ರಕ್ಷಣಾ ಕಾರ್ಯ ಮುಂದುವರಿದಿದೆ. ಘಟನೆಯಲ್ಲಿ ಮಡಿದವರಿಗೆ ಅಮೆರಿಕ, ರಷ್ಯಾ ಅಧ್ಯಕ್ಷ ವ್ಲಾದಮಿರ್ ಪುಟಿನ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ನಡೆದ ಅತೀ ದೊಡ್ಡ ದುರಂತ ಇದಾಗಿದೆ.