ಪವರ್ ಸ್ಟಾರ್ ಪುನೀತ್ ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ: ರಜನಿಕಾಂತ್ ಭಾವುಕ ನುಡಿ

ಬೆಂಗಳೂರು: ಪುನೀತ್ ಎಲ್ಲಿಯೂ ಹೋಗಿಲ್ಲ. ಅಪ್ಪು ದೇವರ ಮಗು. ಆ ದೇವರ ಮಗು ನಮ್ಮ ಜೊತೆ ಬಂದು, ಸ್ವಲ್ಪ ದಿನ ಆಟ ಆಡಿ, ತನ್ನ ಲೀಲೆಯನ್ನು ತೋರಿ ಮತ್ತೆ ದೇವರ ಬಳಿಯೇ ಹೋಗಿದೆ ಎಂದು ಸೂಪರ್ ಸ್ಟಾರ್ ರಜನಿಕಾಂತ್ ಹೇಳಿದರು. ಅವರು ಇಂದು ವಿಧಾನ ಸೌಧದಲ್ಲಿ ನಡೆದ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.

ಸಹಸ್ರಾರು ಅಭಿಮಾನಿಗಳ ಸಮ್ಮುಖದಲ್ಲಿ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ದಿ.ಪುನೀತ್ ರಾಜ್ ಕುಮಾರ್ ಅವರಿಗೆ  ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.

ನಂತರ ಪುನೀತ್ ಅವರ ಬಗ್ಗೆ ಮಾತನಾಡಿದ ಜೂ. ಎನ್ ಟಿ ಆರ್, ಪರಂಪರೆ ಹಾಗೂ ಉಪನಾಮ ಹಿರಿಯರಿಂದ ಬರುತ್ತದೆ. ಆದರೆ ವ್ಯಕ್ತಿತ್ವ ಎಂಬುದು ಆತನ ಸ್ವಂತ ಸಂಪಾದನೆ, ಬರೀ ವ್ಯಕ್ತಿತ್ವದಿಂದ, ಕೇವಲ ನಗುವಿನಿಂದ ಸ್ವಂತ ಪ್ರತಿಭೆಯಿಂದ ರಾಜ್ಯವನ್ನು ಗೆದ್ದಿರುವ ಯಾರಾದರು ಇದ್ದರೆ ಅದು ಪುನೀತ್ ರಾಜ್‌ ಕುಮಾರ್ ಮಾತ್ರ ಎಂದು ಹೇಳಿದರು.

ಕಾರ್ಯಕ್ಕೆಮಕ್ಕೆ ಮಳೆ ಅಡ್ಡಿಯಾಯಿತು. ಮಳೆಯಲ್ಲಿಯೇ ಕಾರ್ಯಕ್ರಮ ನಡೆಯಿತು. ಸಮಾರಂಭಕ್ಕೆ ಸಾವಿರಾರು ಜನ ಸಾಕ್ಷಿಯಾದರು.