‘ಕರ್ನಾಟಕ ರತ್ನ’ ಅಪ್ಪುಗೆ ಸಮರ್ಪಣೆ: ಪುನೀತ್ ಭಾವಚಿತ್ರಕ್ಕೆ ಪತ್ನಿ, ಪುತ್ರಿ ನಮನ

ಬೆಂಗಳೂರು: ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಮರಣೋತ್ತರವಾಗಿ ಪುನೀತ್ ರಾಜ್ ಕುಮಾರ್ ಅವರಿಗೆ ಪ್ರದಾನ ಮಾಡಿದೆ. ಸಿಎಂ ಬಸವರಾಜ ಬೊಮ್ಮಾಯಿ, ಸೂಪರ್ ಸ್ಟಾರ್ ರಜನೀಕಾಂತ್, ಜೂ. ಎನ್ ಟಿಆರ್ ಸೇರಿದಂತೆ ಅನೇಕರು ಈ ಸಂಭ್ರಮದ ಕ್ಷಣಕ್ಕೆ ಸಾಕ್ಷಿಯಾದರು. ಇನ್ನು ಪ್ರಶಸ್ತಿ ಸ್ವೀಕರಿಸಿದ ಅಶ್ವಿನಿ ಪುನೀತ್ ರಾಜ್ ಕುಮಾರ್ ಸರ್ಕಾರಕ್ಕೆ ಧನ್ಯವಾದ ತಿಳಿಸಿದರು.

ಇನ್ನು ಅಶ್ವಿನಿ ಅವರು ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಪುನೀತ್ ಅವರ ಭಾವಚಿತ್ರಕ್ಕೆ ಅರ್ಪಿಸಿದ್ದಾರೆ. ಜೊತೆಗೆ ಚಿನ್ನದ ಪದಕವನ್ನು ಅಪ್ಪು ಫೋಟೋಗೆ ಹಾಕಿ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಹಾಗೂ ಮಗಳು ವಂದಿತಾ ನಮನ ಸಲ್ಲಿಸಿದ್ದಾರೆ.