ರವಿಶಂಕರ್ ಗುರೂಜಿ ‘ಕಾಂತಾರ’ ಸಿನೆಮಾ ವೀಕ್ಷಿಸಿ ಹೇಳಿದ್ದೇನು ಗೊತ್ತಾ.?

ಬೆಂಗಳೂರು: ಬೆಂಗಳೂರಿನಲ್ಲಿ ಶ್ರೀ ರವಿಶಂಕರ್ ಗುರೂಜಿಯ ಆರ್ಟ್ ಆಫ್ ಲೀವಿಂಗ್ ನಲ್ಲಿ ಕಾಂತಾರ ಚಲನಚಿತ್ರ ಪ್ರದರ್ಶನ ಮಾಡಲಾಗಿದೆ. ಇನ್ನು ಖುದ್ದು ಸಿನಿಮಾ ವೀಕ್ಷಿಸಿದ ರವಿಶಂಕರ ಗುರೂಜಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಿನಿಮಾ ನೋಡಿದ ನಂತರ ಮಾತನಾಡಿರುವ ಅವರು, ದಂಥಕಥೆಯನ್ನು ಮನರಂಜನಾತ್ಮಕವಾಗಿ ಹೇಳಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ.

ಇತ್ತೀಚೆಗಷ್ಟೇ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮದಲ್ಲಿ ಈ ಸಿನಿಮಾವನ್ನು ತೋರಿಸಲಾಗಿತ್ತು. ಆಶ್ರಮದಲ್ಲಿ ಮುನ್ನೂರಕ್ಕೂ ಹೆಚ್ಚು ಭಕ್ತರು ಕಾಂತಾರ ಸಿನಿಮಾ ವೀಕ್ಷಿಸಿದ್ದರು.