AICC ಅಧ್ಯಕ್ಷರಾದ ಬಳಿಕ ಮೊದಲ ಬಾರಿ ಬೆಂಗಳೂರಿಗೆ ಆಗಮಿಸುತ್ತಿರುವ ಖರ್ಗೆ: ನ. 6 ರಂದು ಬೃಹತ್ ಅಭಿನಂದನಾ ಸಮಾವೇಶ

ಬೆಂಗಳೂರು: AICC ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ನ. 6 ರಂದು ಮೊದಲ ಬಾರಿಗೆ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರು ರಾಜಧಾನಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆ ಖರ್ಗೆ ಅವರಿಗೆ ಅದ್ಧೂರಿ ಸ್ವಾಗತ ಕೋರಲು ಕೆಪಿಸಿಸಿ ಸಜ್ಜಾಗಿದೆ.

ಇದರ ಭಾಗವಾಗಿ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕುಮಾರ್ ಅವರು ಪೂರ್ವಭಾವಿ ಸಭೆ ನಡೆಸಿ ಹಲವು ವಿಚಾರಗಳ ಸಂಬಂಧ ಚರ್ಚೆ ನಡೆಸಿದರು. ಸಭೆಯಲ್ಲಿ ವಿಜಯನಗರ ಶಾಸಕ ಎಂ ಕೃಷ್ಣಪ್ಪ ಭಾಗಿಯಾಗಿ ಕಾರ್ಯಕ್ರಮದ ಪೂರ್ವ ತಯಾರಿ ಬಗ್ಗೆ ಕೂಲಂಕುಷವಾಗಿ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಕಾರ್ಯಕರ್ತರು, ಪದಾಧಿಕಾರಿಗಳು, ಮುಖಂಡರು, ಹಿರಿಯರು ಮತ್ತಿತರರು ಉಪಸ್ಥಿತರಿದರು.