ಅಧಿವೇಶನ ಉತ್ತಮವಾಗಿಸಲು ಎಲ್ಲಾ ಪಕ್ಷಗಳು ಮತ್ತು ಸಂಸದರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

ನವದೆಹಲಿ: ನೂತನ ಸಂಸದರಿಗೆ ಸಂಸತ್ತಿನಲ್ಲಿ ಹೆಚ್ಚಿನ ಅವಕಾಶ ನೀಡುವಂತೆ ಪ್ರಧಾನಿ ಮೋದಿ ಎಲ್ಲಾ ಪಕ್ಷಗಳ ನಾಯಕರಲ್ಲಿ ಮನವಿ ಮಾಡಿದ್ದಾರೆ.

ಚಳಿಗಾಲದ ಅಧಿವೇಶನ ಪ್ರಾರಂಭವಾಗುವ ಮೊದಲು ಸಂಸತ್ತಿನಲ್ಲಿ ಅಡೆತಡೆಗಳನ್ನು ತಪ್ಪಿಸಬೇಕು. ಇಂತಹ ಅವ್ಯವಸ್ಥೆ ಉಂಟಾದಾಗ ನಾವು ಸೋಲುತ್ತೇವೆ. ಸದನವನ್ನು ನಡೆಸುವುದು ಮುಖ್ಯವಾಗಿದೆ ಎಂದು ಮೋದಿ ಹೇಳಿದರು.

ಎಲ್ಲಾ ಪಕ್ಷಗಳು ಯುವ ಸದಸ್ಯರಿಗೆ ತಮ್ಮ ಉಜ್ವಲ ಭವಿಷ್ಯಕ್ಕಾಗಿ ಚರ್ಚೆಗಳಲ್ಲಿ ಭಾಗವಹಿಸಲು ಅವಕಾಶ ನೀಡಬೇಕು ಎಂದು ಪ್ರಧಾನಿ ಹೇಳಿದರು.

ಸದನ ನಡೆಯಬೇಕು ಎಂಬುದನ್ನು ಪ್ರತಿಪಕ್ಷಗಳು ಸಹ ಒಪ್ಪುತ್ತವೆ. ಅಧಿವೇಶನವನ್ನು ಉತ್ತಮವಾಗಿಸಲು ನಾನು ಎಲ್ಲಾ ಪಕ್ಷಗಳು ಮತ್ತು ಸಂಸದರಲ್ಲಿ ಮನವಿ ಮಾಡುತ್ತೇನೆ ಎಂದು ಪ್ರಧಾನಿ ಹೇಳಿದರು.

ಇನ್ನೂ ಜಿ20ಯ ಭಾರತದ ನಾಯಕತ್ವದ ಬಗ್ಗೆಯೂ ಮಾತನಾಡಿದ ಪ್ರಧಾನಿ ಮೋದಿ, ಇದು ಕೇವಲ ರಾಜತಾಂತ್ರಿಕ ಕಾರ್ಯಕ್ರಮವಲ್ಲ. ದೇಶದ ಶಕ್ತಿಯನ್ನು ಪ್ರದರ್ಶಿಸುವ ಅವಕಾಶವಾಗಿದೆ ಎಂದು ಹೇಳಿದರು.