ಕೋಳಿ ಅಂಕದ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ

ಭಟ್ಕಳ: ತಾಲೂಕಿನ ಶಿರಾಲಿ ಗ್ರಾಮದ ಕೋಟೆಬಾಗಿಲ
ಗಣೇಶ ಸೊಪ್ ಫ್ಯಾಕ್ಟರಿಯ ಹಿಂಭಾಗದಲ್ಲಿ ಕೋಳಿ ಅಂಕದ ಮೇಲೆ ದಾಳಿ ಮಾಡುದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ

ಬಂಧಿತ ಆರೋಪಿಯನ್ನು ನರೇಶ ನಾರಾಯಣ ನಾಯ್ಕ ಮತ್ತು ರವಿ ಮಾದೇವ ನಾಯ್ಕ ಎಂದು ತಿಳಿದು ಬಂದಿದೆ. ಶಿರಾಲಿ ಗ್ರಾಮದ ಕೋಟೆಬಾಗಿಲ ಗಣೇಶ ಸೊಪ್ ಫ್ಯಾಕ್ಟರಿಯ ಹಿಂದೆ ಇರುವ ಖುಲ್ಲಾ ಜಾಗದಲ್ಲಿ ಸಾರ್ವಜನಿಕ ಸ್ಥಳದಲ್ಲಿ ತಮ್ಮ ತಮ್ಮ ಸ್ವಂತ ಲಾಭಕ್ಕೋಸ್ಕರ ಕೋಳಿ ಹುಂಜಗಳ ಕಾಲುಗಳಿಗೆ ಕತ್ತಿ ಕಟ್ಟಿ ಕಾದಾಟಕ್ಕೆ
ಬಿಟ್ಟು ಅದರ ಮೇಲೆ ಹಣವನ್ನು ಪಂಥ ಕಟ್ಟಿ ಆಡಲಾಗುತ್ತಿತ್ತು. ಈ ಸಂದರ್ಭದಲ್ಲಿ ದಾಳಿ ಮಾಡಿದ ಗ್ರಾಮೀಣ ಠಾಣೆ ಪೋಲಿಸರು ಒಟ್ಟು 650 ರೂ. ನಗದು ಹಣ ಹಾಗೂ 1 ಕೋಳಿ ಹುಂಜ ಹಾಗೂ ಕೋಳಿ ಕತ್ತಿಯೊಂದಿಗೆ ಇಬ್ಬರು ಆರೋಪಿಯನ್ನು ಬಂಧಿಸಿದ್ದಾರೆ

ಈ ಕುರಿತು ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ