ಗಾಳಿಯ ರಭಸಕ್ಕೆ ಮುರಿದುಬಿದ್ದ ಮೇಲ್ಛಾವಣಿ.!

ಭಟ್ಕಳ: ಭಾರೀ ಗಾಳಿ ಮಳೆಗೆ ತಾಲೂಕಿನ ಮಾವಳ್ಳಿ-1 ಗ್ರಾಮ ಪಂಚಾಯತ್ ವ್ಯಾಪ್ತಿಯ ಹಿರೇದೋಮಿಯಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ.

ನಾಗಪ್ಪ ಅಣ್ಣಪ್ಪ ಹರಿಕಾಂತ ಎನ್ನುವವರಿಗೆ ಸೇರಿದ ಮನೆಯಾಗಿದ್ದು. ಗಾಳಿಯ ರಭಸಕ್ಕೆ ಮನೆಯ ಹಂಚುಗಳು ಹಾರಿ ಹೋಗಿವೆ. ಮೇಲ್ಛಾವಣಿಯ ಪಕಾಸು ಕಳಚಿ ಬಿದ್ದಿದೆ. ಈ ವೇಳೆ ಮನೆಯಲ್ಲಿ ಯಾರೂ ಇರಲಿಲ್ಲವಾದ್ದರಿಂದ ಹೆಚ್ಚಿನ ಅವಘಡ ತಪ್ಪಿದಂತಾಗಿದೆ.

ಸ್ಥಳಕ್ಕೆ ಮಾವಳ್ಳಿ ಹೋಬಳಿಯ ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ತಾಲೂಕಿನಲ್ಲಿ ಗಾಳಿ ಮಳೆಗೆ ಇದುವರೆಗೂ ಹಲವಾರು ಮನೆಗಳಿಗೆ ಹಾನಿಯಾಗಿದೆ.

Leave a Reply

Your email address will not be published. Required fields are marked *