ಸಾರಿಗೆ ಬಸ್ ಡಿಕ್ಕಿ ಹೊಡೆದು ಮೂವರು ವಿದ್ಯರ್ಥಿಗಳು ಸಾವು

ಬಳ್ಳಾರಿ: ಸಾರಿಗೆ ಬಸ್​ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಹಲಕುಂದಿ ಬಳಿ ಸಂಭವಿಸಿದೆ. ಎಮ್ಮಿಗನೂರಿನ ಕನಕರಾಜು (19), ಮುರುಡಿ ಗ್ರಾಮದ ಶಂಕರ (18) ಮತ್ತು ಸಂಡೂರು ತಾಲೂಕಿನ ನಾಗೇನಹಳ್ಳಿಯ ಹೊನ್ನೂರ (22) ಮೃತ ದುರ್ದೈವಿಗಳು.

ವಿದ್ಯಾರ್ಥಿಗಳು ರಸ್ತೆ ದಾಟುವ ವೇಳೆ ಬೆಂಗಳೂರಿನಿಂದ ಜೇವರ್ಗಿಗೆ ಹೊರಟಿದ್ದ ಸಾರಿಗೆ ಬಸ್​ ಡಿಕ್ಕಿ ಹೊಡೆದಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ಯುವಕರು ಎಸ್​​​ಸಿ, ಎಸ್​​ಟಿ ಹಾಸ್ಟಲ್ ವಿದ್ಯಾರ್ಥಿಗಳಾಗಿದ್ದು ಮಧ್ಯರಾತ್ರಿ ಹಲಕುಂದಿ ಬಳಿ ಯಾಕೆ ಹೋಗಿದ್ದರು ಎಂಬ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಬಳ್ಳಾರಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.