ಕೇಂದ್ರ ಕೃಷಿ ಸಚಿವಾಲಯದಿಂದ ಸಂಸತ್​​ನಲ್ಲಿ ಸಿರಿಧಾನ್ಯ ಭೋಜನ: ಪಕ್ಷಾತೀತವಾಗಿ ಭಾಗವಹಿಸಿದ ನಾಯಕರು.!

ನವದೆಹಲಿ: ಕೇಂದ್ರ ಕೃಷಿ ಸಚಿವಾಲಯವು ಸಂಸತ್​​ನಲ್ಲಿ ಎಲ್ಲ ಸಂಸದರಿಗೆ ಸಿರಿಧಾನ್ಯ ಭೋಜನವೇರ್ಪಡಿಸಿತ್ತು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಖರ್ ಮತ್ತು ಇತರ ಸಂಸದರು ಈ ಭೋಜನಕೂಟದಲ್ಲಿ ಒಟ್ಟಿಗೆ ಭಾಗಿಯಾಗಿದ್ದಾರೆ.

2023 ಅನ್ನು ಅಂತರರಾಷ್ಟ್ರೀಯ ಸಿರಿಧಾನ್ಯ ವರ್ಷವೆಂದು ಗುರುತಿಸಲು ತಯಾರಿ ನಡೆಸುತ್ತಿರುವಾಗ, ಸಂಸತ್ತಿನಲ್ಲಿ ಸಿರಿಧಾನ್ಯದಿಂದ ಮಾಡಿದ ರುಚಿಕರವಾದ ಭೋಜನಕೂಟದಲ್ಲಿ ಭಾಗವಹಿಸಿದ್ದೇವೆ. ಪಕ್ಷಾತೀತವಾಗಿ ಭಾಗವಹಿಸುತ್ತಿರುವುದು ಸಂತಸ ತಂದಿದೆ ಎಂದು ಮೋದಿ ಊಟದ ಕೆಲವು ಚಿತ್ರಗಳನ್ನು ಹಂಚಿಕೊಂಡಿದ್ದಾರೆ.