ವಿಧಾನಪರಿಷತ್ ನೂತನ ಸಭಾಪತಿಯಾಗಿ ಬಸವರಾಜ್ ಹೊರಟ್ಟಿ ಅವಿರೋಧ ಆಯ್ಕೆ.!

ಬೆಳಗಾವಿ: ವಿಧಾನಪರಿಷತ್ ನ ನೂತನ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಅವಿರೋಧವಾಗಿ ಆಯ್ಕೆಯಾಗಿದ ಹಿನ್ನೆಲೆ ಹಂಗಾಮಿ ಸಭಾಪತಿ ರಘುನಾಥ್ ಮಲ್ಕಾಪುರೆ ಅಧಿಕಾರ ಹಸ್ತಾಂತರ ಮಾಡಿದರು. ಸಭಾಪತಿ ಸ್ಥಾನಕ್ಕೆ ಹೊರಟ್ಟಿ ಮಂಗಳವಾರ ನಾಮಪತ್ರ ಸಲ್ಲಿಸಿದ್ದರು.

ಬಸವರಾಜ ಹೊರಟ್ಟಿ ಹೊರತಾಗಿ ಬೇರೆಯವರು ನಾಮಪತ್ರ ಸಲ್ಲಿಕೆ ಮಾಡದ ಹಿನ್ನೆಲೆಯಲ್ಲಿ ‌ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.  ಈ ಸಂದರ್ಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಪರಿಷತ್ ಆಡಳಿತ ಪಕ್ಷದ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

ಕಾಂಗ್ರೆಸ್‌ ಹಾಗೂ ಜಾತ್ಯತೀತ ಜನತಾದಳದ ಸಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನವನ್ನು ಅಲಂಕರಿಸಿದರು. ಈ ಅವಧಿಯಲ್ಲಿ ವಿಜ್ಞಾನ-ತಂತ್ರಜ್ಞಾನ, ಸಣ್ಣ ಉಳಿತಾಯ ಹಾಗೂ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ.