ಎಂಟು ವರ್ಷದ ಬಾಲಕನ ಕಿಡ್ನಾಪ್ ಪ್ರಕರಣದ ಮಾಸ್ಟರ್ ಮೈಂಡ್ ಆರೋಪಿ ಬಂಧನ.!

ಭಟ್ಕಳ: ಎಂಟು ವರ್ಷದ ಬಾಲಕನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೋರ್ವ ಆರೋಪಿಯನ್ನು ಭಟ್ಕಳ ನಗರ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಅಬ್ದುಲ್ ಹನಾನ್ ಮೊಹ್ಮದ ಜಾಫರ್ ಕಡದಾರಿ ಎಂದು ತಿಳಿದು ಬಂದಿದೆ.

ಕಳೆದ ಆಗಸ್ಟ್ 20 ರಂದು ಅಜಾದ್ ನಗರದ 1 ನೇ ಕ್ರಾಸ್ ಸಮೀಪ ಕೊಕ್ತಿ ನಗರದಲ್ಲಿ ಮಾರುತಿ ಗ್ರೇ ಬಣ್ಣದ ಇಕೋ ಕಂಪನಿಯ ಕಾರಿನಲ್ಲಿ ಬಂದ ಬಾಲಕನನ್ನು ಅಪಹರಣ ಮಾಡಿದ್ದರು. ಬಳಿಕ ಗೋವಾದ ಕಲ್ಲಂಗುಟ ಬೀಚ್ ಸಮೀಪ ಬಾಲಕನನ್ನು ಪತ್ತೆ ಹಚ್ಚಿ ಭಟ್ಕಳಕ್ಕೆ ಕರೆತಲಾಗಿತ್ತು.

ಬಳಿಕ ಇಬ್ಬರು ಆರೋಪಿಯನ್ನು ಬಂಧಿಸುವಲ್ಲಿ ಭಟ್ಕಳ ನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದು. ಇದೀಗ ಹೊರ ರಾಜ್ಯದಲ್ಲಿ ತಲೆ ಮರೆಸಿಕೊಂಡಿದ್ದ ಅಪಹರಣದ ಮಾಸ್ಟರ್ ಮೈಂಡ್ ಆರೋಪಿ ಅಬ್ದುಲ್ ಹನಾನ್ ಮೊಹ್ಮದ ಜಾಫರ್ ಕಡದಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ಪ್ರಕರಣ ಮೂವರು ಆರೋಪಿಯನ್ನು ಬಂದಿಸಿದ್ದು. ಇನ್ನೋರ್ವ ಆರೋಪಿ ಬಾಲಕನ ಅಜ್ಜ ಸೌದಿ ಅರೇಬಿಯಾದಲ್ಲಿ ತಲೆ ಮರೆಸಿಕೊಂಡಿದ್ದಾರೆ.