ಬೆಂಗಳೂರು- ಚೆನ್ನೈ ಎಕ್ಸ್‌ಪ್ರೆಸ್ ವೇ ಕಾಮಗಾರಿ ಪರಿಶೀಲಿಸಿದ ಸಚಿವ ನಿತಿನ್ ಗಡ್ಕರಿ

ಬೆಂಗಳೂರು: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಇಂದು ಬೆಂಗಳೂರು- ಚೆನ್ನೈ ಎಕ್ಸ್‌ಪ್ರೆಸ್ ವೇ ಕಾಮಗಾರಿಯನ್ನು ವೈಮಾನಿಕವಾಗಿ ಪರಿಶೀಲಿಸಿದರು.

262 ಕಿಲೋ ಮೀಟರ್ ಉದ್ದದ ಅಷ್ಟಪಥ ಹೆದ್ದಾರಿ ಕಾಮಗಾರಿಯನ್ನು 16,730 ಕೋಟಿ ರೂ. ವೆಚ್ಚದಲ್ಲಿ ಗಂಟೆಗೆ 120 ಕಿಲೋ ಮೀಟರ್ ವೇಗಕ್ಕೆ ತಕ್ಕಂತೆ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ. ಇದರಿಂದ ಬೆಂಗಳೂರು ಮತ್ತು ಚೆನ್ನೈ ನಡುವಣ ದೂರ 300 ಕಿ.ಮೀ ನಿಂದ 262 ಕಿ. ಮೀ ಗೆ ಕಡಿಮೆಯಾಗಲಿದೆ.

ಇದರಿಂದ ವಾಹನಗಳ ನಿರ್ವಹಣೆ ವೆಚ್ಚ ಮತ್ತು ಇಂಧನ ಬಳಕೆ ಕಡಿಮೆಯಾಗಲಿದೆ. ಅಲ್ಲದೇ ಬೆಂಗಳೂರು ಮತ್ತು ಚೆನ್ನೈ ನಡುವಣ ಆರ್ಥಿಕ ಚಟುವಟಿಕೆ ಅಭಿವೃದ್ಧಿಯಾಗಲಿದೆ. ಇನ್ನೂ ಈ ಯೋಜನೆಯು ಕರ್ನಾಟಕ ಮತ್ತು ಆಂಧ್ರಪ್ರದೇಶದ ಕೈಗಾರಿಕಾ ಹಬ್‌ಗಳನ್ನು ಚೆನ್ನೈ ಬಂದರು ಜೊತೆಗೆ ಸಂಪರ್ಕ ಕಲ್ಪಿಸಲಿದೆ.