ಚಿರತೆ ದಾಳಿಗೆ 11 ವರ್ಷದ ಬಾಲಕ ಸಾವು

ಟಿ.ನರಸೀಪುರ: ಚಿರತೆ ದಾಳಿ ಮಾಡಿ ಬಾಲಕನನ್ನು ಎಳೆದೊಯ್ದ ಘಟನೆ ತಾಲ್ಲೂಕಿನ ಹೊರಳಹಳ್ಳಿ ಗ್ರಾಮದಲ್ಲಿ ನಡೆದಿದೆ. ಮನೆಗೆ ತೆರಳುತ್ತಿದ್ದ 11 ವರ್ಷದ ಬಾಲಕ ಜಯಂತ್ ಮೇಲೆ ಚಿರತೆ ದಾಳಿ ಮಾಡಿದ್ದು, ಬಾಲಕ ಸಾವನ್ನಪ್ಪಿದ್ದಾನೆ.

ಗ್ರಾಮದ ದಶಕಂಠ ಎಂಬುವರ ಪುತ್ರ  ಜಯಂತ್ ಸಂಜೆ  ಸಂಬಂಧಿಕರ ಮನೆಗೆ ತೆರಳಿ ವಾಪಸಾಗುವಾಗ, ರಸ್ತೆ ಬದಿಯಲ್ಲಿ ಅವಿತಿದ್ದ ಚಿರತೆ  ಬಾಲಕನ್ನು ಎಳೆದೊಯ್ದಿದೆ. ಬಾಲಕ ಮನೆಗೆ ಬಾರದ್ದರಿಂದ ಪೋಷಕರು ಹಾಗೂ ಸಂಬಂಧಿಕರು  ಹುಡುಕಾಟ ನಡೆಸಿದ್ದರು. ರಸ್ತೆ ಬದಿ ಬಿಸ್ಕೆಟ್ ಪೊಟ್ಟಣ ಹಾಗೂ ರಕ್ತದ ಕಲೆಗಳು ಕಂಡು ಬಂದಿತ್ತು. ಬೆಳಿಗ್ಗೆ ಬಾಲಕನ ಶವ ಪತ್ತೆಯಾಗಿದೆ. ಒಂದು ಕೈ, ತಲೆ ಭಾಗ ಬಿಟ್ಟು ಉಳಿದ ದೇಹದ ಭಾಗ ದೊರೆತಿದೆ ಎಂದು ಗ್ರಾಮಸ್ಥರು ‌ತಿಳಿಸಿದರು.

ಚಿರತೆ ದಾಳಿಯಿಂದ ತಾಲ್ಲೂಕಿನಲ್ಲಿ ಆಗಿರುವ ನಾಲ್ಕನೇ ಬಲಿ ಇದಾಗಿದೆ.