ದೇಶವನ್ನು ಉದ್ದೇಶಿಸಿ ‘ಗಣರಾಜ್ಯೋತ್ಸವ ಭಾಷಣ’ ಮಾಡಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು.!

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ದೇಶವನ್ನು ಉದ್ದೇಶಿಸಿ ‘ಗಣರಾಜ್ಯೋತ್ಸವ ಭಾಷಣ’ ಮಾಡಲಿದ್ದಾರೆ.

ಸಂಜೆ 7 ಗಂಟೆಗೆ ರಾಷ್ಟ್ರಪತಿ ಭಾಷಣವು ಏಕಕಾಲಕ್ಕೆ ದೇಶದ ಎಲ್ಲ ದೂರದರ್ಶನ ಹಾಗೂ ಆಕಾಶವಾಣಿ ಕೇಂದ್ರಗಳಿಂದ ಪ್ರಸಾರವಾಗಲಿದೆ. ಮೊದಲು ಹಿಂದಿಯಲ್ಲಿ ನಂತರ ಇಂಗ್ಲಿಷ್​ನಲ್ಲಿ ಪ್ರಸಾರವಾಗಲಿದೆ. ನಂತರ ಆಕಾಶವಾಣಿಯಲ್ಲಿ 7:30 ಕ್ಕೆ ಪ್ರಾದೇಶಿಕ ಭಾಷೆಯಲ್ಲಿ ಭಾಷಣ ಪ್ರಸಾರವಾಗಲಿದೆ ಎಂದು ರಾಷ್ಟ್ರಪತಿ ಭವನವು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.