ನೆರೆಪೀಡಿತ ಪ್ರದೇಶಕ್ಕೆ ಉಸ್ತುವಾರಿ ಕೋಟಾ ಶ್ರೀನಿವಾಸ್ ಪೂಜಾರಿ ಭೇಟಿ

ಹೊನ್ನಾವರ: ತಾಲೂಕಿನ ಪ್ರವಾಹ ಪೀಡಿತ ಪ್ರದೇಶಗಳಾದ ಗುಂಡಬಾಳ, ನಾಥಗೇರಿ, ಕಡಗೇರಿ, ಹಾಡಗೇರಿ ಗ್ರಾಮಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಶನಿವಾರ ಸಂಜೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ನಂತರ ಕಾಳಜಿ ಕೇಂದ್ರಗಳಿಗೆ ತೆರಳಿ ನೆರೆ ಸಂತ್ರಸ್ತರ ಅವಹಾಲನ್ನು ಆಲಿಸಿದರು. ಜಿಲ್ಲಾಡಳಿತ ಮತ್ತು ಸರ್ಕಾರ ಸದಾ ನಿಮ್ಮೊಂದಿಗೆ ಇದೆ ಎಂದು ಧೈರ್ಯ ತುಂಬಿದರು. ಕಾಳಜಿ ಕೇಂದ್ರದಲ್ಲಿ ಯಾವುದೇ ಕುಂದು ಕೊರತೆಯಾಗದಂತೆ ಅಧಿಕಾರಿಗಳಿಗೆ ಸೂಚಿಸಿದರು.

Leave a Reply

Your email address will not be published. Required fields are marked *