ಹಳಿಯಾಳದಲ್ಲಿ ಕಮಲವನ್ನು ಅಪ್ಪಿಕೊಂಡ ರೈತ ಮುಖಂಡ ನಾಗೇಂದ್ರ ಜಿವೋಜಿ

ಹಳಿಯಾಳ : ಹಳಿಯಾಳ, ದಾಂಡೇಲಿ, ಜೋಯಿಡಾ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುನೀಲ್ ಹೆಗಡೆಯವರ ಕಾರ್ಯಾಲಯದಲ್ಲಿ ಹಳಿಯಾಳ ತಾಲ್ಲೂಕಿನ ಹೋರಾಟಗಾರರು ಹಾಗೂ ರೈತ ಮುಖಂಡರಾದ ನಾಗೇಂದ್ರ ಜಿವೋಜಿಯವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.

ಬಿಜೆಪಿ ಅಭ್ಯರ್ಥಿ ಸುನೀಲ ಹೆಗಡೆಯವರ ಸಮ್ಮುಖದಲ್ಲಿ ಬಿಜೆಪಿಗೆ ನಾಗೇಂದ್ರ ಜಿವೋಜಿಯವರು ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಮಾತನಾಡಿದ ಸುನೀಲ್ ಹೆಗಡೆಯವರು, ಹೋರಾಟಗಾರರು ಮತ್ತು ರೈತ ಮುಖಂಡರಾದ ನಾಗೇಂದ್ರ ಜಿವೋಜಿಯವರು ಬಿಜೆಪಿ ಪಕ್ಷ ಸೇರ್ಪಡೆಯಾಗಿರುವುದು ಪಕ್ಷಕ್ಕೆ ಬಹುದೊಡ್ಡ ಶಕ್ತಿ ಬಂದಂತಾಗಿದೆ ಎಂದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.