ಹೊನ್ನಾವರದಲ್ಲಿ ನಾಳೆ ಯೋಗಿ ಆದಿತ್ಯನಾಥ ಪ್ರಚಾರ

ಹೊನ್ನಾವರ: ಪ್ರಧಾನಿ ನರೇಂದ್ರ ಮೋದಿ ಆಮನದಿಂದ ಜಿಲ್ಲೆಯ ಕಾರ್ಯಕರ್ತರಲ್ಲಿ ಆತ್ಮವಿಶ್ವಾಸ ಹೆಚ್ಚಿಸಿದ್ದು, ಇದಕ್ಕೆ ಪೂರಕವಾಗುವಂತೆ ಇದೀಗ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಅವರು ಮೇ 06ರಂದು ಹೊನ್ನಾವರಕ್ಕೆ ಆಗಮಿಸುತ್ತಿದ್ದು ಜನರಲ್ಲಿ ಮತ್ತಷ್ಟು ವಿಶ್ವಾಸ ಹೆಚ್ಚಾದಂತಾಗಿದೆ.


ವಿಧಾನಸಭಾ ಚುನಾವಣೆಗೆ ಇನ್ನೇನು ಒಂದು ವಾರ ಬಾಕಿ ಇದೆ ಅಷ್ಟೇ. ಅಧಿಕಾರದ ಗದ್ದುಗೆ ಹಿಡಿಯಲು ಮೂರು ಪಕ್ಷಗಳು ಶತಾಯಗತಾಯ ಪ್ರಯತ್ನ ನೆಡೆಸಿದ್ದು,ಹೈಕಮಾಂಡ ವರಿಷ್ಠರೇ ಸ್ವತಃ ತಮ್ಮ ಅಭ್ಯರ್ಥಿಗಳ ಪರ ಪ್ರಚಾರಕ್ಕಾಗಿ ರಾಜ್ಯದಲ್ಲಿ ಮತಕ್ಷೇತ್ರಗಳಲ್ಲಿ ಬೀಡುಬಿಟ್ಟಿದ್ದು ಮತ್ತೊಮ್ಮೆ ರಾಜ್ಯದಲ್ಲಿ ಸರ್ಕಾರ ಆಡಳಿತಕ್ಕೆ ತರುವ ಪ್ರಯತ್ನದಲ್ಲಿದ್ದಾರೆ.

ಹೌದು ಮೊನ್ನೆಯಷ್ಟೇ ಪ್ರಧಾನಿ ನರೇಂದ್ರ ಮೋದಿ ಅಂಕೋಲಾದ ಸಮಾವೇಶ ಕಾರ್ಯಕ್ರಮಕ್ಕೆ ಬಂದ ನಂತರ ತಾಲೂಕಿನ ಕಾರ್ಯಕರ್ತರು ವಿಶ್ವಾಸದ ಅಲೆಯಲ್ಲಿರುವಾಗಲೇ ಅದಕ್ಕೆ ಪುಷ್ಟಿ ನೀಡುವಂತೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ ಹೊನ್ನಾವರಕ್ಕೆ ಚುನಾವಣಾ ಪ್ರಚಾರಕ್ಕಾಗಿ ಆಗಮಿಸುತ್ತಿದ್ದು, ಜಿಲ್ಲೆಯ ಜನರಲ್ಲಿ ಮತ್ತಷ್ಟು ಬಲ ಬಂದಂತಾಗಿದೆ.