ಪ್ರೀತಿ ನಿರಾಕರಿಸಿದ್ದಕ್ಕೆ ಅಪ್ರಾಪ್ತ ಬಾಲಕಿ ಮೇಲೆ ಪ್ರಿಯಕರನಿಂದ ಹಲ್ಲೆ

ತುಮಕೂರು: ಪ್ರೀತಿ ನಿರಾಕರಿಸಿದ್ದಕ್ಕೆ 17 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಚಿಕ್ಕನಾಯಕನಹಳ್ಳಿ (Chikkanayakanahalli) ತಾಲೂಕಿನ ಭಟ್ಟರಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ 25 ವರ್ಷದ ವಿನಯ್ ಕುಮಾರ್ ಎಂಬಾತನಿಂದ ಹಲ್ಲೆ. ಬಾಲಕಿ ಕತ್ತಿಗೆ ಮಚ್ಚಿನಿಂದ ಬರ್ಬರವಾಗಿ ಹಲ್ಲೆ ಮಾಡಲಾಗಿದ್ದು, ಬಾಲಕಿ ಪರಿಸ್ಥಿತಿ ಗಂಭೀರವಾಗಿದೆ. ಕೂಡಲೇ ಬಾಲಕಿಯನ್ನ ಹಾಸನ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾಳೆ. ಈ ಕುರಿತು ಹುಳಿಯಾರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.