ಬಿಜೆಪಿ ಅಭ್ಯರ್ಥಿ ರಾಜೂಗೌಡಗೆ ಸೋಲು- ಅಭಿಮಾನಿಗೆ ಆಘಾತ, ಆಸ್ಪತ್ರೆಗೆ ದಾಖಲು

ಯಾದಗಿರಿ: ಬಿಜೆಪಿ ಅಭ್ಯರ್ಥಿ ರಾಜೂಗೌಡಚುನಾವಣೆಯಲ್ಲಿ ಸೋತ ವಿಚಾರ ಕೇಳಿ ಅಭಿಮಾನಿಯೊಬ್ಬ ಅಘಾತಕ್ಕೊಳಗಾದ ಘಟನೆ ಯಾದಗಿರಿಯಲ್ಲಿ ನಡೆದಿದೆ.

ಗೆದ್ದಪ್ಪ ಪೂಜಾರಿ ತೀವ್ರ ಅಸ್ವಸ್ಥರಾಗಿರುವ ಅಭಿಮಾನಿ, ಅವರನ್ನು ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಮಾಜಿ ಶಾಸಕ ರಾಜೂಗೌಡ ಅವರು ಆಸ್ಪತ್ರೆಗೆ ಭೇಟಿ ನೀಡಿ ಅಭಿಮಾನಿಯ ಆರೋಗ್ಯ ವಿಚಾರಿಸಿದ್ದಾರೆ. ಗೆದ್ದಪ್ಪ ಅವರಿಗೆ ಧೈರ್ಯ ಹೇಳಿ, ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

ಸುರಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ರಾಜೂಗೌಡ 88,336 ಮತಗಳನ್ನು ಪಡೆದಿದ್ದರು. ಇವರ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ರಾಜ ವೆಂಕಟಪ್ಪ ನಾಯಕ 1,13,559 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು.