ಪಾರ್ಟಿ ಮುಗಿಸಿ ಕುಡಿದ ಮತ್ತಿನಲ್ಲಿ ಸ್ನೇಹಿತನಿಂದ ಬಿಎಂಡಬ್ಲ್ಯೂ ಕಾರು ಚಾಲನೆ, ಬಿಎಂಸಿ ಟ್ರಕ್ಗೆ ಡಿಕ್ಕಿ, ಗಗನಸಖಿ ಸಾವು

ವೈಯಕ್ತಿಕ ಕೆಲಸಕ್ಕಾಗಿ ದೆಹಲಿಯಿಂದ ಮುಂಬೈಗೆ ಬಂದಿದ್ದ ಗಗನಸಖಿ ಅಪಘಾತವೊಂದರಲ್ಲಿ ಸಾವನ್ನಪ್ಪಿದ್ದಾರೆ. ಅಪಘಾತದ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗುತ್ತಿದೆ. ಆಕೆಯ ಸ್ನೇಹಿತ ಕುಡಿದ ಅಮಲಿನಲ್ಲಿ ಬಿಎಂಡಬ್ಲ್ಯೂ ಕಾರು ಚಲಾಯಿಸುತ್ತಿದ್ದ ಎನ್ನಲಾಗಿದೆ, ನಿಯಂತ್ರಣ ತಪ್ಪಿ ಬಿಎಂಸಿ ಟ್ರಕ್ಗೆ ಡಿಕ್ಕಿ ಹೊಡೆದಿದ್ದಾರೆ ಪಾರ್ಟಿ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದಾಗ ಜುಹು ಪ್ರದೇಶದಲ್ಲಿ ಘಟನೆ ನಡೆದಿದೆ. ಜುಹು ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಮೃತರನ್ನು ಪಲ್ಲವಿ ಭಟ್ಟಾಚಾರ್ಯ ಎಂದು ಗುರುತಿಸಲಾಗಿದೆ, ಅವರು ದೆಹಲಿ ನಿವಾಸಿಯಾಗಿದ್ದು, ಮೂಲತಃ ಪಶ್ಚಿಮ ಬಂಗಾಳದ ಕೋಲ್ಕತ್ತಾದವರು. ಅವರು ಗಗನಸಖಿಯಾಗಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗಷ್ಟೇ ಕೆಲಸ ಬದಲಾಯಿಸಿ ಬೇರೊಂದು ವಿಮಾನ ಕಂಪನಿಗೆ ಸೇರ್ಪಡೆಯಾಗಿದ್ದರು. ಲೇಸರ್ ಸರ್ಜರಿಗಾಗಿ ಮುಂಬೈಗೆ ಬಂದಿದ್ದರು ಎನ್ನಲಾಗಿದೆ. ಯುವಕ 120 ಕಿ.ಮೀ ವೇಗದಲ್ಲಿ ಕಾರು ಚಲಾಯಿಸುತ್ತಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ.