ಮಗಳನ್ನ ಪರೀಕ್ಷೆಗೆ ಕರೆದುಕೊಂಡು ಹೋದ ತಂದೆ, ವಾಪಸ್ಸಾಗುವಾಗ ಕಾರು ಅಪಘಾತ: ವ್ಯಕ್ತಿ ಮೃತ

ಭಟ್ಕಳ: ಮಗಳನ್ನು ಪರೀಕ್ಷೆ ಕರೆದುಕೊಂಡು ಮರಳಿ ಊರಿಗೆ ಬರುವ ವೇಳೆ ಕಾರು ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದ ಸೇತುವೆಗೆ ಡಿಕ್ಕಿ ಹೊಡೆದು ತಂದೆ ಸ್ಥಳದಲ್ಲೇ ಮೃತಪಟ್ಟ ಘಟನೆ ಭಟ್ಕಳದ ಬೆಳಕೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಜೋಸೆಫ್ ಕುಟ್ಟಿ ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಆತನ ಮಗಳಾದ ಅನು ಮರಿಯಾ ಕೂಡ ಅಪಘಾತದಲ್ಲಿ ಗಾಯಗೊಂಡಿದ್ದು ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ.ಇನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ತನ್ನ ಮಗಳನ್ನು ನೀಟ್ ಪರೀಕ್ಷೆ ಸಂಬಂಧ ಮಂಗಳೂರಿಗೆ ಕರೆದುಕೊಂಡು ಹೋಗಿ ಪರೀಕ್ಷೆ ಮುಗಿಸಿ ಬರುವ ವೇಳೆಯಲ್ಲಿ ಈ ದುರ್ಘಟನೆ ನಡೆದಿದೆ.

Leave a Reply

Your email address will not be published. Required fields are marked *