ನಿಲ್ಲದ ಗುರು-ಶಿಷ್ಯರ ಕಾಳಗ: ಸುನಿಲ್ ಕುಮಾರ್ ವಿರುದ್ಧ ಪ್ರಮೋದ್ ಮುತಾಲಿಕ್ ದೂರು

ಉಡುಪಿ: ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರ ವಿರುದ್ಧ ಶ್ರೀರಾಮ ಸೇನೆ ಸ್ಥಾಪಕ ಪ್ರಮೋದ್ ಮುತಾಲಿಕ್ ಮಾನಹಾನಿ ದೂರು ದಾಖಲಿಸಿದ್ದಾರೆ. ಇತ್ತೀಚೆಗೆ ಸುನೀಲ್ ಕುಮಾರ್ ಬಿಜೆಪಿ ವಿಜಯೋತ್ಸವ ಸಮಾರಂಭದಲ್ಲಿ ಸುನೀಲ್ ಕುಮಾರ್ ಪ್ರಮೋದ ಮುತಾಲಿಕ್ ಒಬ್ಬ ಡೀಲ್ ಮಾಸ್ಟರ್, ಹಣ ಪಡೆದು ಸ್ಪರ್ಧೆ ಮಾಡುತ್ತಾರೆ ಎಂದು ಆರೋಪ ಮಾಡಿದ್ದರು. ಇದೇ ಹೇಳಿಕೆ ವಿರುದ್ಧ ಪ್ರಮೋದ್ ಮುತಾಲಿಕ್ ಕಾರ್ಕಳ ನಗರದ ಠಾಣೆಗೆ ಸಂಗಡಿಗರೊಂದಿಗೆ ತೆರಳಿ ಶಾಸಕ ಸುನೀಲ್ ಕುಮಾರ್​​ ವಿರುದ್ಧ ದೂರು ದಾಖಲಿಸಿದ್ದಾರೆ.