ದೇವರು ನಮ್ಮನ್ನು ಪರೀಕ್ಷಿಸುತ್ತಿದ್ದಾರೆ; ಜಡಿ ಮಳೆ,ಸುಡು ಬಿಸಿಲು ಏನೇ ಬರಲಿ ನಾವು ಹಿಂದೆ ಸರಿಯುವುದಿಲ್ಲ: ಬಜರಂಗ್ ಪುನಿಯಾ

ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳಲ್ಲಿ (Wrestlers Protest)ಒಬ್ಬರಾದ ಬಜರಂಗ್ ಪುನಿಯಾ (Bajrang Punia) ಅವರು ಶನಿವಾರ ಬೆಳಿಗ್ಗೆ ನವದೆಹಲಿಯ ಜಂತರ್ ಮಂತರ್‌ನಲ್ಲಿ ಗುಡುಗು ಸಹಿತ ಮಳೆಯಿಂದಾಗಿ ಟೆಂಟ್ ಹಾರುತ್ತಿರುವ ಫೋಟೊ ಟ್ವೀಟ್ ಮಾಡಿದ್ದಾರೆ.ಇಂದು ಬೆಳಿಗ್ಗೆ ಬಲವಾದ ಗಾಳಿ ಮತ್ತು ಮಳೆಯನ್ನು ಎದುರಿಸಬೇಕಾಯಿತು. ಸುಡುವ ಬಿಸಿಲು ಮತ್ತು ಭಾರೀ ಮಳೆಯನ್ನು ಎದುರಿಸುವಂತೆ ಮಾಡುವ ಮೂಲಕ ದೇವರು ನಮ್ಮನ್ನು ಪರೀಕ್ಷಿಸುತ್ತಿದ್ದಾನೆ. ಎಷ್ಟೇ ಸವಾಲುಗಳು ಬಂದರೂ ನ್ಯಾಯಕ್ಕಾಗಿ ನಾವು ದೃಢವಾಗಿ ನಿಲ್ಲುತ್ತೇವೆ ಎಂದು ಪುನಿಯಾ ಟ್ವೀಟ್ ಮಾಡಿದ್ದಾರೆ. ಬಲವಾದ ಗಾಳಿಯ ವಿರುದ್ಧ ಕುಸ್ತಿಪಟುಗಳು ಟೆಂಟ್‌ಗಳನ್ನು ಹಿಡಿದಿಡಲು ಪ್ರಯತ್ನಿಸುತ್ತಿರುವ ವಿಡಿಯೊವನ್ನು ಪುನಿಯಾ ಹಂಚಿಕೊಂಡಿದ್ದಾರೆ.