ತುಮಕೂರಲ್ಲಿ ರಾಜಕೀಯ ದ್ವೇಷಕ್ಕಾಗಿ ಎರಡು ಗುಂಪುಗಳ ನಡುವೆ ಗಲಾಟೆ

ತುಮಕೂರು: ರಾಜಕೀಯ (Politics) ದ್ವೇಷಕ್ಕಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿರುವ ಘಟನೆ ಮಧುಗಿರಿ ತಾಲೂಕಿನ ಕಡಗತ್ತೂರು ಗ್ರಾಮದಲ್ಲಿ ನಡೆದಿದೆ. ಮಧುಗಿರಿ ಕ್ಷೇತ್ರದಲ್ಲಿ ಜೆಡಿಎಸ್ (JDS) ಸೋತಿರುವ ವಿಚಾರಕ್ಕೆ ಜೆಡಿಎಸ್ ಮುಖಂಡ ಮುದ್ದಪ್ಪ ಹಾಗೂ ಕಾಂಗ್ರೆಸ್ (Congress) ಮುಖಂಡ ಕೃಷ್ಣಪ್ಪ ಮಧ್ಯೆ ವಾಗ್ವಾದ ನಡೆದಿದೆ. ಈ ಬಳಿಕ ಕೃಷ್ಣಪ್ಪನ ಕಡೆಯವರು ಮುದ್ದಪ್ಪ ಬೈಕ್ಗೆ ಬೆಂಕಿ ಹಚ್ಚಿದ್ದಾರೆ ಆರೋಪ ಕೇಳಿಬಂದಿದೆ. ಇದಕ್ಕೆ ಪ್ರತೀಕಾರವಾಗಿ ಮುದ್ದಪ್ಪನ ಕಡೆಯವರು ಕೃಷ್ಣಪ್ಪ ಮೇಲೆ ಹಲ್ಲೆ ಮಾಡಿದ್ದಾರೆಂದು ಆರೋಪವಿದೆ. ಇದರಿಂದ ಕೃಷ್ಣಪ್ಪನ ತಲೆಗೆ ಗಾಯ‌ವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಡಿಗೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪೊಲೀಸ್ ಠಾಣೆ ಆವರಣದಲ್ಲೇ ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಹಲ್ಲೆ
ರಾಯಚೂರು: ಪೊಲೀಸ್ ಠಾಣೆ ಆವರಣದಲ್ಲೇ ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಗಬ್ಬೂರು ಪೊಲೀಸ್ ಠಾಣೆಯಲ್ಲಿ ನಡೆದಿದೆ. ನರಸಿಂಹಲು ಹಲ್ಲೆಗೊಳಗಾದ ಪೊಲೀಸ್ ಕಾನ್ಸಟೇಬಲ್. ಘಟನೆ ಸಂಬಂಧ ಗಬ್ಬೂರು ಪೊಲೀಸರು ಮೂವರು ಆರೋಪಿಗಳನ್ನು ಬಂಧಸಿದ್ದಾರೆ. ಸೈಯದ್ ಫರೀದ್, ಸೈಯದ್ ವಹೀದ್, ಸೈಯದ್ ದಸ್ತಗಿರಿ ಬಂಧಿತ ಆರೋಪಿಗಳು.
ಲಾರಿ ಹಾಗೂ ಟಾಟಾ ಏಸ್ ನಡುವೆ ನಡೆದಿದ್ದ ಅಪಘಾತ ನಡೆದಿತ್ತು. ಪ್ರಕರಣ ಸಂಬಂಧ ಪೊಲೀಸ್ ಠಾಣೆಯಲ್ಲಿ ಮಾತುಕತೆ ನಡೆಯುವಾಗ ಪೊಲೀಸ್ ಕಾನ್ಸಟೇಬಲ್ ಲಾರಿ ಚಾಲಕ ಪರ ಮಾತನಾಡುತ್ತಿದ್ದರು ಅಂತ ಹಲ್ಲೆ ಮಾಡಿದ್ದಾರೆ. ಗಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಸ್ ಡಿಪೋ ಹಿಂಭಾಗ ಚಿರತೆ ಪ್ರತ್ಯಕ್ಷ
ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆ ಬಸ್ ಡಿಪೋ ಹಿಂಭಾಗ ಇರುವ ಶಿಕ್ಷಕಿ ರತ್ನಾ ನಿವಾಸದ ಬಳಿ ತಡರಾತ್ರಿ ಚಿರತೆ ಕಾಣಿಸಿಕೊಂಡಿದೆ. ಚಿರತೆ ಓಡಾಟದ ದೃಶ್ಯ ಮನೆ ಮುಂದಿನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಪ್ರದೇಶದಲ್ಲಿ ಒಂಟಿಯಾಗಿ ಓಡಾಡದಂತೆ ತಾಲೂಕು ಆಡಳಿತ ಎಚ್ಚರಿಕೆ ನೀಡಿದೆ. ಇನ್ನು ಅರಣ್ಯ ಅಧಿಕಾರಿಗಳು ಚಿರತೆ ಸೆರೆಗೆ ಬೋನು ಇಡಲು ಮುಂದಾಗಿದೆ.