ಯಲ್ಲಾಪುರ:ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎನ್ಎಸ್ಎಸ್ ನ ಒಂದು ಹಾಗೂ ಎರಡನೇ ಘಟಕಗಳ ಆಶ್ರಯದಲ್ಲಿ ಶ್ರಮದಾನ ನಡೆಸಲಾಯಿತು.

ಇದು ನನ್ನ ಕಾಲೇಜು, ಸ್ವಚ್ಛ ಕಾಲೇಜು’ ಎಂಬ ಘೋಷವಾಕ್ಯದಡಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಪ್ರಾಂಶುಪಾಲ ಡಿ.ಎಸ್.ಭಟ್ಟ ಚಾಲನೆ ನೀಡಿದರು.
ಎನ್ಎಸ್ಎಸ್ ಸ್ವಯಂಸೇವಕರು ಕಾಲೇಜಿನ ಆವಾರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಪ್ರತಿಜ್ಞೆ ಮಾಡಿದರು. ನಂತರ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿಗಳಾದ ಡಿ.ಜಿ.ತಾಪಸ್ ಹಾಗೂ ರಾಮಕೃಷ್ಣ ಗೌಡ ಅವರ ಮಾರ್ಗದರ್ಶನದಲ್ಲಿ ಸ್ವಯಂಸೇವಕರು ಕಾಲೇಜಿನ ಆವಾರದಲ್ಲಿ ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯ ನಡೆಸಿದರು.