ಸಿದ್ದಾಪುರ: ಶಿಕ್ಷಕರ ಸಂಘದಿಂದ ಶಾಸಕರಿಗೆ ಅಭಿನಂದನೆ


ಸಿದ್ದಾಪುರ : ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದವರು ಶಿರಸಿ ಸಿದ್ದಾಪುರ ಕ್ಷೇತ್ರದ ನೂತನ ಶಾಸಕ ಭೀಮಣ್ಣ ನಾಯ್ಕರವರನ್ನು ಶಿರಸಿಯ ಕಚೇರಿಯಲ್ಲಿ ಅಭಿನಂದಿಸಿದರು. ಅಭಿನಂದನೆ ಸ್ವೀಕರಿಸಿ ಮಾತನಾಡಿದ ಶಾಸಕರು ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಪಾತ್ರ ತುಂಬಾ ಹೆಚ್ಚಿನದು. ಸಮಾಜದ ಕಟ್ಟ ಕಡೆಯ ಮಗುವಿಗೂ ಶಿಕ್ಷಣ ನೀಡುವಲ್ಲಿ ಶಿಕ್ಷಕರು ಮಾನವೀಯತೆಯ ನೆಲೆಗಟ್ಟಿನ ಮೇಲೆ ಕಾರ್ಯನಿರ್ವಹಿಸಬೇಕು ಈ ದಿಶೆಯಲ್ಲಿ ಸಿದ್ದಾಪುರ ತಾಲೂಕಿನ ಶಿಕ್ಷಕರು ಕ್ರಿಯಾಶೀಲರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದರು. ಸರಕಾರದ ಹಂತದಲ್ಲಿ ತಾನು ಶಿಕ್ಷಕರ ಪರವಾಗಿ ನಿಂತು ಶಿಕ್ಷಕರ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು. ಸಂಫದ ಅಧ್ಯಕ್ಷ ಸತೀಶ ಹೆಗಡೆ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕಾರ್ಯದರ್ಶಿ ಗುರುರಾಜ ನಾಯ್ಕ ವಂದಿಸಿದರು. ಈ ಸಂದರ್ಭದಲ್ಲಿ ನಾಗರಾಜ ಮಡಿವಾಳ, ಮಂಜುಳಾ ಪಟಗಾರ,ಜಿ.ಜಿ. ಹೆಗಡೆ, ಬಸವರಾಜ ಕಡಪಟ್ಟಿ, ಜಿ. ಆರ್. ಹೆಗಡೆ, ಸಹನಾ ಬಿ. ಎಲ್, ಯಶೋಧಾ ಭಟ್,ಕೆ. ಎನ್ ಹೆಗಡೆ,ರಾಜು ನಾಯ್ಕಮತ್ತು ಸಲಹಾ ಸಮಿತಿಯ ಸದಸ್ಯರು, ಶಿಕ್ಷಕರು ಹಾಜರಿದ್ದರು.