ಸಿದ್ದಾಪುರ : ಕ್ಷೇತ್ರದ ಅಭಿವೃದ್ಧಿಗೆ ನಮ್ಮ ಸಹಕಾರ ಯಾವತ್ತು ಇರುತ್ತದೆ,: ಕಾಗೇರಿ

ಸಿದ್ದಾಪುರ: ಶಾಸಕ ಭೀಮಣ್ಣ ನಾಯ್ಕ್ ಬಿಜೆಪಿ ಸರ್ಕಾರ ಮಂಜೂರು ಗೊಳಿಸಿದ ಕಾಮಗಾರಿ ಮಾಡುವುದರ ಜೊತೆಗೆ ಈಗಿನ ಅನುದಾನಕ್ಕಿಂತ ಹೆಚ್ಚಿನ ಅನುದಾನ ಯೋಜನೆ ತಂದು ಕ್ಷೇತ್ರದ ಅಭಿವೃದ್ಧಿ ಮಾಡಿ ತೋರಿಸಲಿ ಎಂದು ವಿಧಾನಸಭೆ ಮಾಜಿ ಅಧ್ಯಕ್ಷರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಹೇಳಿದರು.
ಪಟ್ಟಣದ ರಾಘವೇಂದ್ರ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಕಾರ್ಯಕರ್ತರ ಅಭಿನಂದನಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಮತದಾರರಿಗೆ ಕಾಂಗ್ರೆಸ್ ಪಕ್ಷವು ನೀಡಿದಂತಹ 5 ಗ್ಯಾರಂಟಿ ಗಳನ್ನೂ ಈಡೇರಿಸಬೇಕೆಂದು ಆಗ್ರಹಿಸಿದರು. ಬಿಜೆಪಿ ಯ ಮುಖವಾಡ ಹಾಕಿಕೊಂಡು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸಿದವರ ಮೇಲೆ ಪಕ್ಷದ ವರಿಷ್ಠರು ಶಿಸ್ತು ಕ್ರಮ ಕೈಗೊಳ್ಳುವಂತೆ ಸಭೆಯ ಮೂಲಕ ಆಗ್ರಹಿಸಿದರು. ನೂತನ ಶಾಸಕ ಭೀಮಣ್ಣ ನಾಯ್ಕ ಅವರಿಗೆ ಶುಭಕೋರಿ ಕ್ಷೇತ್ರದ ಅಭಿವೃದ್ಧಿಗೆ ನಮ್ಮ ಸಹಕಾರ ಯಾವತ್ತು ಇರುತ್ತದೆ ಎಂದರು.
ಕಾರ್ಯಕ್ರಮದ ಸ್ವಾಗತ ಹಾಗೂ ಪ್ರಾಸ್ತಾವಿಕ ನುಡಿಯನ್ನು ಮಂಡಲ ಅಧ್ಯಕ್ಷರಾದ ಮಾರುತಿ ನಾಯ್ಕ್ ಹೊಸೂರ್ ನೆರವೇರಿಸಿದರು. ನಂತರ ಪಕ್ಷದ ಕಾರ್ಯಕರ್ತರು ತಮ್ಮ ಅನಿಸಿಕೆಗಳನ್ನು ವ್ಯಕ್ತ ಪಡಿಸಿದರು.
ಸಭೆಯಲ್ಲಿ ವಿಭಾಗ ಸಹ ಪ್ರಭಾರಿ ಆರ್ ಡಿ ಹೆಗಡೆ ಜಾನ್ಮನೆ, ಬಿ ಜೆ ಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಉಷಾ ಹೆಗಡೆ, ರವಿ ಹೆಗಡೆ ಹೂವಿನಮನೆ,ನಗರ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ತೋಟಪ್ಪ ನಾಯ್ಕ, ಜಿಲ್ಲಸಮಿತಿಯ ಗುರುರಾಜ ಶಾನಭಾಗ್ ಉಪಸ್ಥಿತರಿದ್ದರು.