ಸಿದ್ದಾಪುರ : ಕಾನೂನು ಬಾಹಿರ ಚಟುವಟಿಕೆಗಳನ್ನು ತಡೆಯಲು ಕಠಿಣ ಕ್ರಮ : ಎಸ್ ಪಿ ವಿಷ್ಣುವರ್ಧನ್.

ಸಿದ್ದಾಪುರ : ಕಾನೂನು ಬಾಹಿರ ಚಟುವಟಿಕೆಗಳನ್ನು ತಡೆಯಲು ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಹೇಳಿದರು ಅವರು
ಸಿದ್ದಾಪುರ ಕೆ ಭೇಟಿ ನೀಡಿದ ಸಂದರ್ಭದಲ್ಲಿ ಠಾಣೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು
ಓಸಿ,ಮಟ್ಕಾ,ಅಕ್ರಮ, ಸರಾಯಿ ಮಾರಾಟ ತಡೆಯಲು ದಾಳಿಯನ್ನು ನಡೆಸಿ ಪ್ರಕರಣವನ್ನು ದಾಖಲಿಸಲಾಗುವುದು
ಹೆಚ್ಚಿನ ಚಟುವಟಿಕೆಗಳು ನಡೆದಿದ್ದು ಕಂಡುಬಂದಲ್ಲಿ ಸಾರ್ವಜನಿಕ ರು ಸ್ಥಳೀಯ ಪೊಲೀಸರಿಗೆ ಅಥವಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಗಮನಕ್ಕೆ ತಂದರೆ ಜಿಲ್ಲೆಯ ವಿಶೇಷ ತಂಡವು ದಾಳಿಯನ್ನು ನಡೆಸಿ ಕ್ರಮವನ್ನು ಕೈಗೊಳ್ಳುತ್ತದೆ ಒಟ್ಟಿನಲ್ಲಿ ಅಕ್ರಮ ಚಟುವಟಿಕೆಗಳನ್ನು ತೊಡೆಯಲು ಕಟ್ಟುನಿಟ್ಟಿನ ಕ್ರಮವನ್ನು ಕೈಗೊಳ್ಳಲಾಗುತ್ತಿದೆ, ಅಕ್ರಮ ಸರಾಯಿ ಮಾರಾಟಕ್ಕೆ ಸಂಬಂಧಿಸಿದಂತೆ ಅಬಕಾರಿ ಮತ್ತು ಪೊಲೀಸ್ ಇಲಾಖೆಯವರು ಜಂಟಿಯಾಗಿ ದಾಳಿ ನಡೆಸಿ ಪ್ರಕರಣವನ್ನು ದಾಖಲಿಸುತ್ತೇವೆ ಎಂದರು