ಹಳಿಯಾಳ :ಕಸಾಪ ಜಿಲ್ಲಾ ಮತ್ತು ತಾಲ್ಲೂಕು ಘಟಕದಿಂದ ಆರ್.ವಿ.ದೇಶಪಾಂಡೆಯವರಿಗೆ ಸನ್ಮಾನ

ಹಳಿಯಾಳ : ರಾಜ್ಯ ವಿಧಾನ ಸಭೆಗೆ 9 ನೇ ಬಾರಿಗೆ ಆಯ್ಕೆಯಾದ ಹಳಿಯಾಳ, ದಾಂಡೇಲಿ, ಜೋಯಿಡಾ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಆರ್.ವಿ.ದೇಶಪಾಂಡೆಯವರನ್ನು ಕನ್ನಡ ಸಾಹಿತ್ಯ ಪರಿಷತ್ ಉತ್ತರ ಕನ್ನಡ ಜಿಲ್ಲಾ ಘಟಕ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಹಳಿಯಾಳ, ದಾಂಡೇಲಿ ಮತ್ತು ಜೋಯಿಡಾ ತಾಲ್ಲೂಕು ಘಟಕದ ಪರವಾಗಿ ಹಳಿಯಾಳ ಪಟ್ಟಣದಲ್ಲಿರುವ ಆರ್.ವಿ.ದೇಶಪಾಂಡೆಯವರ ಸ್ವಗೃಹದಲ್ಲಿ ಸನ್ಮಾನಿಸಲಾಯ್ತು.

ಸನ್ಮಾನಕ್ಕೆ ಕೃತಜ್ಞತೆ ಸಲ್ಲಿಸಿ ಮಾತನಾಡಿದ ಆರ್.ವಿ.ದೇಶಪಾಂಡೆ ಎಲ್ಲರ ಸಹಕಾರದಲ್ಲಿ 9ನೇ ಬಾರಿಗೂ ಗೆಲುವು ಸಾಧಿಸಿದ್ದೇನೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನನ್ನನ್ನು ನಾನು ತೊಡಗಿಸಿಕೊಳ್ಳಲು ನಿಮ್ಮೆಲ್ಲರ ಈ ಪ್ರೀತಿ ನನಗೆ ಪ್ರೇರಣೆಯಾಗಲಿದೆ ಎಂದರು.

ಈ ಸಂದರ್ಭದಲ್ಲಿ ಕಸಾಪ ಜಿಲ್ಲಾಧ್ಯಕ್ಷರಾದ ಬಿ.ಎನ್.ವಾಸರೆ, ಕಸಾಪ ಜಿಲ್ಲಾ ಕೋಶಾಧ್ಯಕ್ಷ ಮುರ್ತುಜಾ ಹುಸೇನ್ ಆನೆಹೊಸೂರು, ಕಸಾಪ ಜೋಯಿಡಾ ತಾಲ್ಲೂಕು ಘಟಕದ ಅಧ್ಯಕ್ಷ ಪಾಂಡುರಂಗ ಪಟಗಾರ, ಕಸಾಪ ಹಳಿಯಾಳ ತಾಲ್ಲೂಕು ಘಟಕದ ಅಧ್ಯಕ್ಷೆ ಸುಮಂಗಲಾ ಅಂಗಡಿ, ದಾಂಡೇಲಿ ತಾಲ್ಲೂಕು ಘಟಕದ ನಾರಾಯಣ ನಾಯ್ಕ, ಹಾಗೂ ಕಸಾಪ ತಾಲ್ಲೂಕು ಘಟಕಗಳ ಪದಾಧಿಕಾರಿಗಳು, ಕಸಾಪ ಅಜೀವ ಸದಸ್ಯರು, ಪತ್ರಕರ್ತರು ಉಪಸ್ಥಿತರಿದ್ದರು.