ಯಲ್ಲಾಪುರ:ಡೋಮಗೇರಿಯಲ್ಲಿ ಮನೆಯೊಳಗೆ ನುಗ್ಗಿ ಆಭರಣ, ಹಣ ಕಳ್ಳತನ ಮಾಡಿದ್ದ ವ್ಯಕ್ತಿಯನ್ನು ಯಲ್ಲಾಪುರ ಪೊಲೀಸರು ಬಂಧಿಸಿದ್ದಾರೆ



ಬೆಳಗಾವಿ ಜಿಲ್ಲೆಯ ಖಾನಾಪುರದ ಬಸವರಾಜ ರುದ್ರಪ್ಪ ಅಂಬಡಗಟ್ಟಿ ಬಂಧಿತ ವ್ಯಕ್ತಿ. ಈತ ಕಳೆದ ಮೇ.24 ರಂದು ಡೋಮಗೇರಿಯ ಪ್ರದೀಪ ದಿವಾಕರ ಹೆಗಡೆ ಎಂಬವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಒಳನುಗ್ಗಿ ಹಣ, ಆಭರಣ ಸೇರಿ 1.40 ಲಕ್ಷ ರೂ ಮೌಲ್ಯದ ಸ್ವತ್ತನ್ನು ಕಳವು ಮಾಡಿದ್ದ.
ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ, ಆರೋಪಿಯನ್ನು ಬಂಧಿಸಿ, ಕಳವು ಮಾಡಿದ್ದ 40 ಗ್ರಾಂ ಬಂಗಾರ ವಶಪಡಿಸಿಕೊಂಡಿದ್ದಾರೆ.
ಎಸ್.ಪಿ ವಿಷ್ಣುವರ್ಧನ್, ಎ.ಎಸ್.ಪಿ ಜಯಕುಮಾರ, ಡಿವೈಎಸ್ಪಿ ಗಣೇಶ. ಕೆ.ಎಲ್ ಮಾರ್ಗದರ್ಶನದಲ್ಲಿ ಪಿಐ ರಂಗನಾಥ ನೀಲಮ್ಮನವರ್, ಪಿಎಸ್ಐಗಳಾದ ರವಿ ಗುಡ್ಡಿ, ಲತಾ ಕೆ.ಎನ್, ಸಿಬ್ಬಂದಿ ಬಸವರಾಜ ಹಗರಿ, ಮಹಮ್ಮದ್ ಶಫಿ, ಗಜಾನನ, ಗಿರೀಶ ಲಮಾಣಿ, ಪರಶುರಾಮ ಕಾಳೆ, ಚನ್ನಕೇಶವ, ಪ್ರವೀಣ ಇತರರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.