ಅಮಿತ್​ ಶಾರನ್ನು ಭೇಟಿಯಾದ ಚಂದ್ರಬಾಬು ನಾಯ್ಡು, ತೆಲಂಗಾಣ ಚುನಾವಣೆಗೆ ಬಿಜೆಪಿ ಜತೆ ಮೈತ್ರಿ?

ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು  ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದರು.

ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದರು. ಶನಿವಾರ ಮಧ್ಯಾಹ್ನ ದೆಹಲಿ ತಲುಪಿದ ಚಂದ್ರಬಾಬು ರಾತ್ರಿ 8 ಗಂಟೆಗೆ ಅಮಿತ್ ಶಾ ನಿವಾಸದಲ್ಲಿ ಜೆಪಿ ನಡ್ಡಾ ಶಾ ಅವರನ್ನು ಭೇಟಿ ಮಾಡಿದರು. ಈ ಮೂವರ ನಡುವಿನ ಸಭೆ ಸುಮಾರು 40 ನಿಮಿಷಕ್ಕೂ ಹೆಚ್ಚು ಕಾಲ ನಡೆಯಿತು. ಇತ್ತೀಚಿನ ರಾಜಕೀಯ ಬೆಳವಣಿಗೆ ಮತ್ತಿತರ ವಿಷಯಗಳ ಕುರಿತು ಮೂವರು ನಾಯಕರು ಚರ್ಚೆ ನಡೆಸಿದ್ದಾರೆಂದು ತೋರುತ್ತದೆ.

ಈ ವರ್ಷ ನಡೆಯಲಿರುವ ತೆಲಂಗಾಣ ವಿಧಾನಸಭಾ ಚುನಾವಣೆಗೆ ಬಿಜೆಪಿ ಮತ್ತು ಟಿಡಿಪಿ ಮೈತ್ರಿ ಮಾಡಿಕೊಳ್ಳಬಹುದು ಎಂದು ಮೂಲಗಳು ತಿಳಿಸಿವೆ.2019 ರ ಚುನಾವಣೆಯ ನಂತರ ಆಜಾದಿ ಕಾ ಅಮೃತ್ ಮಹೋತ್ಸವದ ಸಂದರ್ಭದಲ್ಲಿ ಚಂದ್ರಬಾಬು ಒಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದರು. ಟಿಡಿಪಿ 2014 ರಲ್ಲಿ ಎನ್‌ಡಿಎ ಭಾಗವಾಗಿತ್ತು ಆದರೆ 2019 ರ ಚುನಾವಣೆಯ ಮೊದಲು ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನದ ವಿಚಾರವಾಗಿ ಮಾರ್ಚ್ 2018 ರಲ್ಲಿ ಆಡಳಿತ ಮೈತ್ರಿಕೂಟವನ್ನು ತ್ಯಜಿಸಿತು.

ಅದರ ನಂತರ, ಅವರು ಜಿ 20 ಪೂರ್ವಸಿದ್ಧತಾ ಸಮ್ಮೇಳನದಲ್ಲಿ ಭಾಗವಹಿಸಲು ದೆಹಲಿಗೆ ಹೋದಾಗ ಮತ್ತೆ ಭೇಟಿಯಾದರು. ಸಂಪರ್ಕದಲ್ಲಿರಿ ಎಂದು ಪ್ರಧಾನಿ ಮೋದಿ ಆ ಸಂದರ್ಭದಲ್ಲಿ ಚಂದ್ರಬಾಬುಗೆ ಸಲಹೆ ನೀಡಿದ್ದು ಗೊತ್ತೇ ಇದೆ. ಇತ್ತೀಚೆಗಷ್ಟೇ ದೆಹಲಿಯಲ್ಲಿ ಚಂದ್ರಬಾಬು ಅವರು ಜೆಪಿ ನಡ್ಡಾ ಹಾಗೂ ಅಮಿತ್ ಶಾ ಅವರನ್ನು ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಮುಂದಿನ ಚುನಾವಣೆಯಲ್ಲಿ ತೆಲುಗು ದೇಶಂ ಪಕ್ಷ, ಜನಸೇನೆ ಹಾಗೂ ಬಿಜೆಪಿ ಒಟ್ಟಾಗಿ ಸ್ಪರ್ಧಿಸಲಿವೆ ಎಂಬ ಸುದ್ದಿ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಚಂದ್ರಬಾಬು ದೆಹಲಿ ಭೇಟಿ ಮಹತ್ವ ಪಡೆದುಕೊಂಡಿದೆ. ಆದರೆ, ಚಂದ್ರಬಾಬು ಅವರ ದೆಹಲಿ ಭೇಟಿ ಖಾಸಗಿಯಾಗಿದ್ದು ಎಂದು ಪಕ್ಷದ ಮೂಲಗಳು ತಿಳಿಸಿವೆ. ತೆಲಂಗಾಣದಲ್ಲಿ ತೆಲುಗು ದೇಶಂ ಪಕ್ಷಕ್ಕೆ ಹತ್ತಿರವಾದರೆ ಬಿಜೆಪಿಗೆ ಲಾಭಕ್ಕಿಂತ ನಷ್ಟವೇ ಹೆಚ್ಚು ಎಂದು ತೆಲಂಗಾಣ ಬಿಜೆಪಿ ನಾಯಕರು ಆರಂಭದಲ್ಲಿ ಅಭಿಪ್ರಾಯಪಟ್ಟಿದ್ದರು.