ವಿದ್ಯುತ್ ತಗುಲಿ ಲೈನ್ ಮ್ಯಾನ್ ಸಾವು; ಕಂಬದ ಮೇಲೆಯೇ ನೇತಾಡಿದ ಮೃತದೇಹ

ವಿದ್ಯುತ್ ತಗುಲಿ ಲೈನ್ ಮ್ಯಾನ್ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅರಕೇರಾ ತಾಲ್ಲೂಕಿನ ಆಲದಮರದ ತಾಂಡದಲ್ಲಿ ನಡೆದಿದೆ. ವಿರೂಪಾಕ್ಷ(28) ಮೃತ ರ್ದುದೈವಿ.

ರಾಯಚೂರು: ವಿದ್ಯುತ್ ತಗುಲಿ ಲೈನ್ ಮ್ಯಾನ್ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅರಕೇರಾ ತಾಲ್ಲೂಕಿನ ಆಲದಮರದ ತಾಂಡದಲ್ಲಿ ನಡೆದಿದೆ. ವಿರೂಪಾಕ್ಷ(28) ಮೃತ ರ್ದುದೈವಿ. ವಿರೂಪಾಕ್ಷ ಅರಕೇರಾ ಜುಟಮರಡಿ ಕೆಇಬಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ. ಇಂದು(ಜೂ.4) ವಿದ್ಯುತ್ ಪೂರೈಕೆಯ ಸಮಸ್ಯೆಯನ್ನು ಪರಿಹರಿಸಲು ಕಂಬ ಹತ್ತಿದ್ದನು. ಈ ವೇಳೆ ವಿದ್ಯುತ್ ಶಾಕ್ ಹೊಡೆದಿದ್ದು, ವಿದ್ಯುತ್ ಕಂಬದ ಮೇಲೆಯೇ ಕೊನೆಯುಸಿರೆಳದಿದ್ದಾನೆ. ಈ ಕುರಿತು ದೇವದುರ್ಗ ಠಾಣಾ ವ್ಯಾಪ್ತಿ ಪ್ರಕರಣ ದಾಖಲಾಗಿದೆ.