ದಾಂಡೇಲಿ :ನುಡಿದಂತೆ ನಡೆಯುವ ಪಕ್ಷ ಕಾಂಗ್ರೆಸ್ : ಆರ್.ವಿ.ದೇಶಪಾಂಡೆ

ದಾಂಡೇಲಿ : ಈ ದೇಶದಲ್ಲಿ ನುಡಿದಂತೆ ನಡೆಯುವ ಪಕ್ಷವಿದ್ದರೇ ಅದು ಕಾಂಗ್ರೆಸ್ ಪಕ್ಷ. ಈ ಹಿಂದೆ 2013 ರಲ್ಲಿಯೂ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರ ನುಡಿದಂತೆ ನಡೆಯುವುದರ ಮೂಲಕ ನೀಡಿದ ಭರವಸೆಗಳನ್ನು ಈಡೇರಿಸಿದ ಹೆಗ್ಗಳಿಕೆಯನ್ನು ಹೊಂದಿದೆ. ಅಂತೆಯೆ ಈ ಬಾರಿಯೂ ಚುನಾವಣೆಯ ಸಮಯದಲ್ಲಿ ನೀಡಿದ ಗ್ಯಾರಂಟಿ ಯೋಜನೆಗಳನ್ನು ಅನುಷ್ಟಾನ ಪಡಿಸುವ ಮೂಲಕ ಕೊಟ್ಟ ಮಾತನ್ನು ರಾಜ್ಯದ ಕಾಂಗ್ರೆಸ್ ಸರಕಾರ ಉಳಿಸಿಕೊಡಲಿದೆ. ಸಿದ್ದರಾಮಯ್ಯನವರು ಹಣಕಾಸು ಸಚಿವರಾಗಿ ದಾಖಲೆಯ ಬಾರಿ ಬಜೆಟ್ ಮಂಡಿಸಿದ ಅನುಭವವನ್ನು ಹೊಂದಿರುವುದರಿಂದ ಎಲ್ಲವನ್ನು ಅಳೆದು ತೂಗಿಯೆ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಲಾಗಿದ್ದು, ಅಂತೆಯೆ ಅದನ್ನು ಅನುಷ್ಟಾನಗೊಳಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಸರಕಾರ ಮುಂದಾಗಿದೆ ಎಂದು ನಗರದಲ್ಲಿ ಶಾಸಕರಾದ ಆರ್.ವಿ.ದೇಶಪಾಂಡೆಯವರು ಹೇಳಿದರು.