ಅಂಕೋಲಾ:ಯಶಸ್ವಿಯಾಗಿ ನಡೆದ ನಾಗರಿಕ ಸನ್ಮಾನ ಹಾಗೂ ಅಭಿನಂದನಾ ಸಮಾರಂಭ.

 ಅಂಕೋಲಾ ಕ್ಷೇತ್ರದ ಸಮಸ್ತ ನಾಗರಿಕರು ಹಾಗೂ ಕಾರ್ಯಕರ್ತರು ಸೇರಿ ಕಾರವಾರ-ಅಂಕೋಲಾ ವಿಧಾನ ಸಭಾ ಸದಸ್ಯ ಸತೀಶ ಸೈಲ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಇದೇ ಮೊದಲ ಬಾರಿಗೆ ಆಗಮಿಸಿದ್ದ ಸೈಲ್ ಗೆ ಅಂಕೋಲಾ ಕ್ಷೇತ್ರದ ಜನತೆ ಹಾಗೂ ಕಾರ್ಯಕರ್ತರ ಪರವಾಗಿ ತಾಲೂಕಿನ ನಾಡವರ ಸಮುದಾಯ ಭವನದಲ್ಲಿ ನಾಗರಿಕ ಸನ್ಮಾನ ಹಾಗೂ ಅಭಿನಂದನಾ ಸಮಾರಂಭ ಏರ್ಪಡಿಸಿ ಗೌರವಿಸಲಾಯಿತು.

ತಾಲೂಕಿನ 22 ಗ್ರಾಮ ಪಂಚಾಯತನ ಪ್ರತಿನಿಧಿಗಳು, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ತಾಲೂಕಾ ಗುತ್ತಿಗೆದಾರರ ಸಂಘ, ಮಹಿಳಾ ಘಟಕಗಳು ಹಾಗೂ ಜನಸಾಮಾನ್ಯರು ಸೇರಿ ಸನ್ಮಾನ ಮಾಡುವ ಮೂಲಕ ಶಾಸಕರಿಗೆ ಗೌರವ ಸಲ್ಲಿಸಿದರು.
    ಈ ಸಂದರ್ಭದಲ್ಲಿ ಮಾತನಾಡಿದ ಕಾರವಾರ-ಅಂಕೋಲಾ ವಿಧಾನ ಸಭಾ ಕ್ಷೇತ್ರದ ಶಾಸಕ ಸತೀಶ ಸೈಲ್ ಮಾತನಾಡಿ ನಿಮ್ಮೆಲ್ಲರ ಆಶೀರ್ವಾದ ಹಾಗೂ ಸಹಕಾರದಿಂದಾಗಿ ನಾನು ಶಾಸಕನಾಗಿದ್ದೇನೆ. ಇನ್ನು ಮುಂದೆ ಕ್ಷೇತ್ರದ ಅಭಿವೃದ್ಧಿ ಹಾಗೂ ಸರ್ಕಾರದ ಎಲ್ಲ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ಹಗಲಿರುಳು ಶ್ರಮಿಸಿ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲು ಪ್ರಯತ್ನಿಸುತ್ತೇನೆ ಎಂದರು.

ತಾಲೂಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ವಿಶೇಷ ಸನ್ಮಾನ:

  ಈ ಸಂದರ್ಭದಲ್ಲಿ ಅಂಕೋಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶಾಸಕ ಸೈಲ್ ಗೆ ವಿಶೇಷವಾಗಿ ಕಾರ್ಯಕ್ರಮದ ಕೊನೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಬಿರಿಯಾನಿ ಊಟ ಸವಿದ ಜನಸಾಮಾನ್ಯರು:
ಮಧ್ಯಾಹ್ನದ ಊಟಕ್ಕಾಗಿ ಸುಮಾರು 2 ಸಾವಿರ ಜನಕ್ಕೆ ಬಿರಿಯಾನಿ ಊಟದ ವ್ಯವಸ್ಥೆ ಮಾಡಲಾಗಿದ್ದು ಪ್ರತಿಯೊಬ್ಬರೂ ಬಿರಿಯಾನಿಯ ಸವಿಯನ್ನು ಸವಿದರು.