೨೦೨೩ ನೇ ಸಾಲಿನ ರಾಜ್ಯ ಪರಿಸರ ಪ್ರಶಸ್ತಿಯನ್ನುಪಡೆದ ರಾಜ್ಯದ ಖ್ಯಾತ ಪರಿಸರ ವಿಜ್ಞಾನಿ ಡಾ. ಎಂ.ಡಿ. ಸುಭಾಶ ಚಂದ್ರನ್

ಕುಮಟಾ :– ವಿಶ್ವ ಪರಿಸರ ದಿನಾಚರಣೆ 2023 ಅಂಗವಾಗಿ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾದ ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಜ್ಯದ ಖ್ಯಾತ ಪರಿಸರ ವಿಜ್ಞಾನಿಯಾದ ಉತ್ತರ ಕನ್ನಡ ಜಿಲ್ಲೆಯ ಕುಮಟಾ ನಗರದ ಡಾ. ಎಂ.ಡಿ. ಸುಭಾಶ ಚಂದ್ರನ್ ರವರಿಗೆ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ಧರಾಮಯ್ಯ ರವರು ರಾಜ್ಯ ಪರಿಸರ ಪ್ರಶಸ್ತಿಯನ್ನು ಪ್ರಧಾನ ಮಾಡಿದರು.

ಡಾ.ಸುಭಾಶ ಚಂದ್ರರವರು ಭಾರತೀಯ ವಿಜ್ಞಾನ ಸಂಸ್ಥೆ ಬೆಂಗಳೂರಿನ ಪರಿಸರ ವಿಜ್ಞಾನ ಕೇಂದ್ರದಲ್ಲಿ ಸಂದರ್ಶಕ ವಿಜ್ಞಾನಿಯಾಗಿದ್ದು ಹಾಗೂ ರಾಜ್ಯ ಕಡಲ ತೀರ ವಲಯ ನಿರ್ವಹಣಾ ಪ್ರಾಧಿಕಾರದ ಸದಸ್ಯರು ಆಗಿದ್ದು ಕರಾವಳಿ ಮತ್ತು ಪಶ್ಚಿಮ ಘಟ್ಟದ ಪರಿಸರದ ಸಂಶೋಧನೆಯಲ್ಲಿ ಹಲವಾರು ಸಂಶೋಧನಾ ಪ್ರಭಂಧಗಳನ್ನು ಮತ್ತು ಲೇಖನಗಳನ್ನು ಬರೆದಿರುತ್ತಾರೆ. ಶ್ರೀಯುತರಿಗೆ ಸಂದ ಗೌರವಕ್ಕೆ ಅವರ ಅಪಾರ ಶಿಷ್ಯರು ಸಂತಸ ವ್ಯಕ್ತಪಡಿಸಿದ್ದಾರೆ.