ತಂದೆಯ ಕಾರ್ಯ ಮುಗಿಸಿ ಮನೆಗೆ ಬಂದಾಗ ಕಾದಿತ್ತು ಶಾಕ್.!

ಮುರ್ಡೇಶ್ವರ: ಕಳ್ಳರು ಬಾಗಿಲು ಮುರಿದು ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕದ್ದು ಪರಾರಿಯಾಗಿರುವ ಘಟನೆ ಮಾವಳ್ಳಿ-1 ಗ್ರಾಮದ ಜನತಾ ಕಾಲೋನಿಯಲ್ಲಿ ನಡೆದಿದೆ.

ಗ್ರಾಮದ ಮಾದೇವ ಈರಪ್ಪ ನಾಯ್ಕ ಎನ್ನುವವರ ಮನೆ ಕಳ್ಳತನವಾಗಿದೆ. ಕಳೆದ 15 ದಿನಗಳ ಹಿಂದಷ್ಟೇ ಇವರ ತಂದೆ ನಿಧನರಾಗಿದ್ದು ಅವರ ಕಾರ್ಯ ಮಾಡಲು ಕುಟುಂಬದೊAದಿಗೆ ಹಳೆಯ ಮನೆಗೆ ಹೊಗಿದ್ದರು. ರಾತ್ರಿ ಅಲ್ಲಿಯೇ ವಾಸ್ತವ್ಯ ಹೂಡಿ ಮರು ದಿನ ಬೆಳ್ಳಿಗ್ಗೆ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ತಕ್ಷಣ ಮನೆ ಮಾಲಿಕ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾನೆ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಕಳ್ಳರು ಇಂಟರ್ ಲಾಕ್ ಮುರಿದು ಮನೆ ಪ್ರವೇಶಿಸಿ ಕೋಣೆಯಲ್ಲಿರುವ ಕಪಾಟಿನಲ್ಲಿದ್ದ ಉಂಗುರ, ಸರ, ಬ್ರೆಸ್ ಲೈಟ್ ಸೇರಿದಂತೆ ಸುಮಾರು 2 ಲಕ್ಷ 80 ಸಾವಿರ ಮೌಲ್ಯದ ಚಿನ್ನಾಭರಣ ಕದ್ದು ಪರಾರಿಯಾಗಿದ್ದಾರೆ. ಈ ಬಗ್ಗೆ ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಕೈಗೊಂಡಿದ್ದಾರೆ.