ಮಹಾರಾಣಿ ಕಾಲೇಜ್ ಬಳಿ ಅಂಡರ್ ಪಾಸ್‍ನಲ್ಲಿ ಸಿಲುಕಿದ ಲಾರಿ

ಬೆಂಗಳೂರು: ಸಿಲಿಕಾನ್ ಸಿಟಿಯ ಅಂಡರ್ ಪಾಸ್‍ನಲ್ಲಿ ಲಾರಿ ಯೊಂದು ಸಿಲುಕಿಕೊಂಡಿರುವ ಘಟನೆ ನಡೆದಿದೆ.

ಮಹಾರಾಣಿ ಕಾಲೇಜ್ ಬಳಿ ಇರುವ ಅಂಡರ್ ಪಾಸ್‍ ನಲ್ಲಿ ಲಾರಿ ಸಿಕ್ಕಿಹಾಕಿಕೊಂಡಿದ್ದು, ಪೊಲೀಸರು ಅಂಡರ್ ಪಾಸ್ ಬಂದ್ ಮಾಡಿದ್ದಾರೆ. ಮೈಸೂರು ಬ್ಯಾಂಕ್ ಸರ್ಕಲ್ ನಿಂದ ಚಾಲುಕ್ಯ ಸರ್ಕಲ್ ಸಂಪರ್ಕಿಸೋ ರಸ್ತೆ ಅಂಡರ್ ಪಾಸ್ ಬಳಿ ಬಂದ್ ಆಗಿದೆ.

ಲಾರಿಯು ಮೈಸೂರು ಬ್ಯಾಂಕ್ ಕಡೆಯಿಂದ ಬಂದು ಮುಂದೆ ಚಲಿಸಲಾಗದೆ ಅಂಡರ್‍ಪಾಸ್‍ನಲ್ಲಿ ಸಿಲುಕಿದೆ. ಈ ಲಾರಿ ಯನ್ನು ಹೊರ ತೆಗೆಯಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಉಪ್ಪಾರಪೇಟೆ ಸಂಚಾರಿ ಪೊಲೀಸರು ಲಾರಿ ತೆಗೆಯಲು ಜೆಸಿಬಿ ತರಿಸಿದ್ದಾರೆ.

ಅಂಡರ್ ಪಾಸ್‍ನಲ್ಲಿ ಲಾರಿ ತೆರಳಲು ಸಾಧ್ಯವಿಲ್ಲ. ಆದರೂ ಚಾಲಕ ಅಂಡರ್ ಪಾಸ್‍ನಲ್ಲಿ ನುಗ್ಗಿಸಲು ಪ್ರಯತ್ನಿಸಿದ್ದರಿಂದ ಸಿಲುಕಿಕೊಂಡಿದೆ. ಲಾರಿ ಸಿಲುಕಿದ ಹಿನ್ನೆಲೆಯಲ್ಲಿ ವಾಹನ ಸವಾರರು ಪರದಾಟ ಅನುಭವಿಸಿದ್ದಾರೆ. ಚಾಲುಕ್ಯ ಸರ್ಕಲ್‌ ಗೆ ಬರಲು ಫ್ರೀಡಂ ಪಾರ್ಕ್ ಕಡೆಯಿಂದ ಬನ್ನಿ ಎಂದು ಪೊಲೀಸರು ಸೂಚನೆ ನೀಡಿದ್ದಾರೆ.