ದಾವಣಗೆರೆ: ಖಾಸಗಿ ಬಸ್‌ನಲ್ಲೂ ಉಚಿತ ಪ್ರಯಾಣಕ್ಕೆ ಕೂಗು!

ದಾವಣಗೆರೆ (ಜೂ.7) ರಾಜ್ಯಾದ್ಯಂತ ಜೂ.11ರಿಂದ ಅನ್ವಯವಾಗುವಂತೆ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದಂತೆ ಖಾಸಗಿ ಬಸ್ಸುಗಳಲ್ಲೂ ಪ್ರಯಾಣಿಸಲು ಅವಕಾಶ ಕಲ್ಪಿಸುವ ಮೂಲಕ ಗ್ರಾಮೀಣ ಮಹಿಳೆಯರಿಗೂ ಯೋಜನೆ ಲಾಭ ಕಲ್ಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಖಾಸಗಿ ಬಸ್ಸು ಮಾಲೀಕರ ಸಂಘವು ಒತ್ತಾಯಿಸಿದೆ.

ಕಾಂಗ್ರೆಸ್ಸಿನ ಐದು ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಬಸ್ಸು ಪ್ರಯಾಣವೂ ಒಂದಾಗಿದೆ. ಇದೀಗ ಕೆ.ಎಸ್.ಆರ್.ಟಿ .ಸಿ ಸಾಮಾನ್ಯ ಬಸ್ಸುಗಳಲ್ಲಿ ಮಾತ್ರ ಮಹಿಳೆಯರಿಗೆ ಉಚಿತ ಪ್ರಯಾಣ ಅವಕಾಶ ಕಲ್ಪಿಸಿ, ಕೆಲವೊಂದು ಷರತ್ತುಗಳನ್ನೂ ವಿಧಿಸಿದೆ. ಇದರ ಬೆನ್ನಲ್ಲೇ ಕೆ.ಎಸ್.ಆರ್.ಟಿ .ಸಿ ಬಸ್ಸುಗಳಂತೆ ಖಾಸಗಿ ಬಸ್ಸಿನಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲು ಖಾಸಗಿ ಬಸ್ಸು ಮಾಲೀಕರ ಸಂಘದ ಜಿಲ್ಲಾ ಘಟಕ ಸರ್ಕಾರಕ್ಕೆ ಮನವಿ ಮಾಡಿದೆ.