ದಾಂಡೇಲಿ :ದಾಂಡೇಲಿ ತಾಲೂಕಿನ ಬರ್ಚಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್- ಸವಾರಿಬ್ಬರಿಗೆ ಗಾಯ

ದಾಂಡೇಲಿ : ಪ್ರವಾಸಕ್ಕೆಂದು ನಗರಕ್ಕೆ ಬಂದಿದ್ದ ದಂಪತಿಗಳಿಬ್ಬರು ಸ್ಥಳೀಯ ಬಾಡಿಗೆ ದ್ವಿಚಕ್ರ ವಾಹನದಲ್ಲಿ ಜೋಯಿಡಾ ತಾಲ್ಲೂಕಿನ ಗಣೇಶಗುಡಿಗೆ ಹೋಗಿ ಹಿಂದಿರುಗಿ ಬರುತ್ತಿದ್ದಾಗ ದಾಂಡೇಲಿ ತಾಲ್ಲೂಕಿನ ಬರ್ಚಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್ ಆಗಿ ಬಿದ್ದು, ಇಬ್ಬರಿಗೂ ಗಾಯವಾದ ಘಟನೆ ನಡೆದಿದೆ.

ರಾಯಚೂರಿನ ಬಸವರಾಜ ಸಾಹುಕಾರ್ ಮತ್ತು ಅವರ ಪತ್ನಿ ಅಕ್ಷತಾ ಬಸವರಾಜ ಎಂಬವುರಗಳೆ ಗಾಯಗೊಂಡವರಾಗಿದ್ದಾರೆ. ಇವರು ನಗರದ ರೆಂಟಲ್ ದ್ವಿಚಕ್ರ ವಾಹನವನ್ನು ಬಾಡಿಗೆಗೆ ಪಡೆದು ಗಣೇಶಗುಡಿಗೆ ಹೋಗಿ ಹಿಂದುರುಗಿ ಬರುತ್ತಿದ್ದಾಗ ಈ ಘಟನೆ ನಡೆದಿದೆ. ಗಾಯಗೊಂಡ ಇಬ್ಬರಿಗೂ ನಗರದ ಸಾರ್ವಜನಿಕ ಆಸ್ಪತ್ರೆಗೆ ಕರೆ ತರಲಾಗಿದ್ದು, ಬಸವರಾಜ ಸಾಹುಕಾರ್ ಎಂಬವರಿಗೆ ಕಾಲಿಗೆ ಗಾಯವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.