ಕಾಲೇಜಿಗೆ ಹೋಗಿ ಬರೋದಾಗಿ ಹೇಳಿ ಮನೆಯಿಂದ ತೆರಳಿದ್ದ ವಿದ್ಯಾರ್ಥಿ ನಾಪತ್ತೆ.!

ಹೊನ್ನಾವರ: ಕಾಲೇಜಿಗೆ ಹೋಗುವುದಾಗಿ ಮನೆಯಿಂದ ತೆರಳಿದ ವಿದ್ಯಾರ್ಥಿಯೊರ್ವ ನಾಪತ್ತೆಯಾದ ಘಟನೆ ನಡೆದಿದೆ. ಪಟ್ಟಣದ ಗಾಂಧಿನಗರದ ನಿವಾಸಿ ಗಣೇಶ ರತ್ನಾಕರ ಶೇಟ್ ನಾಪತ್ತೆಯಾದ ವಿದ್ಯಾರ್ಥಿಯಾಗಿದ್ದು, ಈತ ಎಸ್ ಡಿ ಎಮ್ ಕಾಲೇಜಿನಲ್ಲಿ ಪಿಯುಸಿ ಸೈನ್ಸ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ.

ಸೋಮವಾರ ಗಣೇಶ್ ಕಾಲೇಜಿಗೆ ಹೋಗಿ ಬರುವುದಾಗಿ ಮನೆಯಲ್ಲಿ ಹೇಳಿ ತೆರಳಿದ್ದ. ಸಂಜೆಯಾದರೂ ವಾಪಸ್ ಮನೆಗೆ ಬಂದಿರಲಿಲ್ಲ. ಇದರಿಂದ ಆತಂಕಿತರಾದ ಪಾಲಕರು ಕಾಲೇಜಿಗೆ ಹೋಗಿ ವಿಚಾರಿಸಿದ್ದಾರೆ. ಆದರೆ ಕಾಲೇಜಿನಲ್ಲೂ ಈತನ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಆದರೆ ಸೋಮವಾರ ಕಾಲೇಜಿಗೆ ಬಂದಿಲ್ಲ ಎಂದು ಕಾಲೇಜಿನ ಪ್ರಿನ್ಸಿಪಾಲರು ತಿಳಿಸಿದ್ದಾರೆ.

ಬಳಿಕ ಕುಟುಂಬಸ್ಥರು ಸಂಬಧಿಕರು ಹಾಗೂ ಮಗನ ಸ್ನೇಹಿತರಲ್ಲಿ ವಿಚಾರಿಸಿದ್ದಾರೆ. ಆದರೂ ಮಗನ ಬರುವಿಕೆ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲದ ಹಿನ್ನೆಲೆಯಲ್ಲಿ ಗಣೇಶ ಅವರ ತಂದೆ ರತ್ನಾಕರ ಶೇಟ್, ಮಂಗಳವಾರ ಹೊನ್ನಾವರ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.