ಅನಾರೋಗ್ಯದಿಂದಾಗಿ ಮಾಜಿ ಸಚಿವ ಪ್ರಭಾಕರ್ ರಾಣೆ ಆಸ್ಪತ್ರೆಗೆ ದಾಖಲು

ಕಾರವಾರ: ಮಾಜಿ ಸಚಿವ ಪ್ರಭಾಕರ್ ರಾಣೆ ಅವರು ಅನಾರೋಗ್ಯದಿಂದ ನಗರದ ಸರ್ಕಾರಿ ಜಿಲ್ಲಾಸ್ಪತ್ರೆಗೆ ದಾಖಲಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 80 ವರ್ಷ ವಯಸ್ಸಿನ ಪ್ರಭಾಕರ್ ರಾಣೆಯವರಿಗೆ ಕಳೆದ ಎರಡು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿತ್ತು. ಹೀಗಾಗಿ ಅವರನ್ನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ರಾಣೆ ಅವರನ್ನ ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಆರೋಗ್ಯ ಸ್ಥಿರವಾಗಿದ್ದು, ಇನ್ನೂ ಕೆಲ ದಿನಗಳ ಕಾಲ ಐಸಿಯುವಿನಲ್ಲಿ ಚಿಕಿತ್ಸೆ ಮುಂದುವರಿಸುವುದಾಗಿ ಜಿಲ್ಲಾ ಆಸ್ಪತ್ರೆಯ ಅಧೀಕ್ಷಕ ಡಾ.ಶಿವಾನಂದ ಕುಡ್ತರಕರ್ ತಿಳಿಸಿದ್ದಾರೆ.

‘ಪಿ.ಎಸ್.ರಾಣೆಯವರು ಶೀಘ್ರ ಚೇತರಿಸಿಕೊಳ್ಳಲಿ’ ಎಂದು ಕಾಂಗ್ರೆಸ್ ಮುಖಂಡ ಆರ್. ವಿ. ದೇಶಪಾಂಡೆ ಹಾರೈಸಿದ್ದಾರೆ. ಇನ್ನು ಅನಾರೋಗ್ಯಕ್ಕೊಳಗಾದ ರಾಣೆಯವರನ್ನು ಮಂಗಳವಾರ ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯಕ, ಜಿಲ್ಲಾ ಪತ್ರಿಕಾ ಭವನ ನಿರ್ವಹಣಾ ಸಮಿತಿಯ ಅಧ್ಯಕ್ಷ ಟಿ.ಬಿ.ಹರಿಕಾಂತ್ ಹಾಗೂ ಹಲವು ಗಣ್ಯರು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.