ಹೆಣ್ಣೆಂಬ ಕಾರಣಕ್ಕೆ ಹುಟ್ಟಿದ ಮಗುವನ್ನೇ ಮುಳ್ಳಲ್ಲಿ ಬೀಸಾಡಿ ಹೋದ ಪೋಷಕರು

ಕೊಪ್ಪಳ :  ರಾಜ್ಯದಲ್ಲಿ ಮಕ್ಕಳಿಲ್ಲದೇ ಸಾಕಷ್ಟು ಜನರು ಜೀವನಪೂರ್ತಿ ಬಳಲುವುದನ್ನು ನಾವು ನೋಡಿದ್ದೇವೆ. ಆದರೆ, ಹೆಣ್ಣು ಮಗು ಹುಟ್ಟಿದೆ ಎಂಬ ಕಾರಣಕ್ಕೆ ಬೆಳಗ್ಗೆ ತಾನೆ ಹುಟ್ಟಿದ ಇನ್ನೂ ಕಣ್ಣನ್ನು ಬಿಡದ ನವಜಾತ ಶಿಶುವನ್ನು ಮುಳ್ಳಿನ ಬೇಲಿಯಲ್ಲಿ ಬೀಸಾಡಿ ಹೋಗಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದಿದೆ. 

ಹೆಣ್ಣು ಮಗು ಎಂದು ನವಜಾತ ಶಿಶುವನ್ನು ಮುಳ್ಳಿನಲ್ಲಿ ಎಸೆದು ಹೋದ ಪಾಪಿ ತಾಯಿ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಪ್ರಗತಿನಗರ ಗ್ರಾಮದಲ್ಲಿ ಘಟನೆ ನಡೆದಿದೆ. ಬೆಳಗಿನ ಜಾವ ನವಜಾತ ಶಿಶು ಅಳುವುದನ್ನು ಕಂಡ ಸ್ಥಳೀಯರು. ನವಜಾತ ಶಿಶುವನ್ನು ರಕ್ಷಣೆ ಮಾಡಿ ಆರೈಕೆ ಮಾಡಿದ್ದಾರೆ. ಹೆರಿಗೆಯಾದ ಬಳಿಕ ಮಗುವನ್ನು ಎಸೆದು ಹೋದ ಪಾಪಿ ತಾಯಿಯನ್ನು ಹುಡಕಿದರೂ ಪತ್ತೆಯಾಗಿಲ್ಲ. ನಂತರ, ಸ್ಥಳೀಯ ಮಹಿಳೆಯರು ಮಗುವನ್ನು ರಕ್ಷಣೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಪ್ರಗತಿನಗರ ಗ್ರಾಮದ ಗಂಗಮ್ಮ ಎನ್ನುವವರ ಮನೆಯಲ್ಲಿ ಮಗು ಆರೈಕೆ ಆಗುತ್ತಿದೆ. ಸ್ಥಳಕ್ಕೆ ಗಂಗಾವತಿ ಗ್ರಾಮೀಣ ಪೊಲೀಸರು ಆಗಮಿಸಿ ಸ್ಥಳ ಪರಿಶೀಲನೆ ಮಾಡಿದ್ದಾರೆ.