ದಾಂಡೇಲಿ :ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯ ಜೀವ ಉಳಿಸಿದ ಪಿಎಸೈ ಮತ್ತು ಪೊಲೀಸ್ ಸಿಬ್ಬಂದಿಗಳಿಗೆ ಕಾಂಗ್ರೆಸ್ ಮಹಿಳಾ ಘಟಕದಿಂದ ಸನ್ಮಾನ

ದಾಂಡೇಲಿ : ನಗರದ ಹಳೆದಾಂಡೇಲಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯ ಜೀವ ಉಳಿಸಿದ ದಾಂಡೇಲಿ ನಗರ ಪೊಲೀಸ್ ಠಾಣೆಯ ಪಿಎಸೈ ಐ.ಆರ್.ಗಡ್ಡೇಕರ್ ಮತ್ತು ಪೊಲೀಸ್ ಸಿಬ್ಬಂದಿಗಳಾದ ಮಂಜುನಾಥ ದೇಮಟ್ಟಿ ಹಾಗೂ ಸಿದ್ರಾಮ ರಾಮರಥ ಅವರಿಗೆ ದಾಂಡೇಲಿ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದಿಂದ ನಗರ ಪೊಲೀಸ್ ಠಾಣೆಯಲ್ಲಿ ಸನ್ಮಾನಿಸಲಾಯ್ತು.

ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ರೇಣುಕಾ ಬಂದಂ ಅವರು ಸನ್ಮಾನಿಸಿದರು.

ಸನ್ಮಾನಕ್ಕೆ ಕೃತಜ್ಞತೆ ಸಲ್ಲಿಸಿ ಮಾತನಾಡಿದ ಪಿಎಸೈ ಐ.ಆರ್.ಗಡ್ಡೇಕರ್ ಅವರು ರೇಣುಕಾ ಬಂದಂ ಅವರು ಅನಾಮಧೇಯ ಕರೆ ಎಂದು ಸುಮ್ಮನಾಗಿದ್ದರೇ ಒಂದು ಮಹಿಳೆ ಸಾವನ್ನಪ್ಪುತ್ತಿದ್ದಳು. ಆಕೆಯ ಪುಟ್ಟ ಮಕ್ಕಳು ತಾಯಿ ಪ್ರೀತಿಯಿಂದ ವಂಚಿತರಾಗಿ ತಬ್ಬಲಿಗಳಾಗುತ್ತಿದ್ದರು ಎಂದ ಅವರು ನಾವು ಜನರ ಸಮಸ್ಯೆಗಳಿಗೆ ಹಾಗೂ ತೊಂದರೆಯಾದಾಗ ತಕ್ಷಣವೆ ಸ್ಪಂದಿಸುವ ಕಾರ್ಯ ಮಾಡುತ್ತಲೆ ಬರುತ್ತಿದ್ದೇವೆ. ಅದು ನಮ್ಮ ಕರ್ತವ್ಯವೂ ಹೌದು. ಈ ರೀತಿ ಅನಾಮದೇಯ ಕರೆ ಬಂದಾಗ ಅದನ್ನೂ ಯಾರು ತಳ್ಳಿ ಹಾಕಬೇಡಿ, ಇಲಾಖೆಯ ಗಮನಕ್ಕೆ ತನ್ನಿ ಎಂದು ಹೇಳಿ ಸನ್ಮಾನಿಸಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ತನಿಖಾ ವಿಭಾಗದ ಪಿಎಸೈ ಪಿ.ಬಿ.ಕೊಣ್ಣೂರು ಹಾಗೂ ಪೊಲೀಸ್ ಸಿಬ್ಬಂದಿಗಳು ಮತ್ತು ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.