ಅತ್ತಿಗೆಯನ್ನು ಗುರಾಯಿಸಿದ ಯುವಕ, ಪ್ರಶ್ನಿಸಿದ ಯುವತಿಗೆ ಕಲ್ಲಿನಿಂದ ಹಲ್ಲೆ

ಚಿಕ್ಕಬಳ್ಳಾಪುರ: ಅತ್ತಿಗೆಯನ್ನು ಗುರಾಯಿಸಿದ್ದನ್ನು ಪ್ರಶ್ನಿಸಿ ಬುದ್ಧಿವಾದ ಹೇಳುವಂತೆ ತಾಯಿಗೆ ಸೂಚಿಸಿದ್ದಕ್ಕೆ ಯುವಕನೊಬ್ಬ ಯುವತಿ ಮೇಲೆ ಹಲ್ಲೆ ಡೆಸಿದ ಘಟನೆ ಚಿಂತಾಮಣಿಯ ಆಶ್ರಯ ಬಡಾವಣೆಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಮಹಿಳೆಯನ್ನು ಗುರಾಯಿಸಿದ ಯುವಕ ಯುವರಾಜ್ ವಿರುದ್ಧ ಚಿಂತಾಮಣಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಜಾತ ಎಂಬ ಮಹಿಳೆಯನ್ನು ಯುವರಾಜ್​​​​​ ಗುರಾಯಿಸುತ್ತಿದ್ದ. ಇದನ್ನು ಪ್ರಶ್ನಿಸಿದ ಯುವತಿ ಸುಧಾ, ನಿಮ್ಮ ಮಗನಿಗೆ ಬುದ್ಧಿವಾದ ಹೇಳುವಂತೆ ಯುವರಾಜ್ ತಾಯಿಗೆ ಸೂಚಿಸಿದ್ದಾಳೆ. ಇದರಿಂದ ಕೋಪಗೊಂಡ ಯುವರಾಜ್, ಸುಧಾಳಿಗೆ ಕಲ್ಲಿನಿಂದ ಹೊಡೆದ ಹಲ್ಲೆ ನಡೆಸಿದ್ದಾನೆ. ಹಲ್ಲೆಯಿಂದ ಗಾಯಗೊಂಡಿರುವ ಸುಧಾಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಯುವತಿ ನೀಡಿದ ದೂರಿನ ಅನ್ವಯ ಚಿಂತಾಮಣಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚೆಗಷ್ಟೇ, ತನ್ನ ತಾಯಿಯನ್ನು ನೋಡಿದ ಎಂಬ ಕಾರಣಕ್ಕೆ ಚಿಕ್ಕಮಗಳೂರಿನ ಟೀಪು ನಗರದ ರಿಯಾನ್, ಫಾಜಿಲ್, ಮುಜುಬ್ ಎಂಬವರು ಮುಜೀಬ್ ಎಂಬ ಯುವಕನ ಮೇಲೆ ಮಚ್ಚಿನಿಂದ ಗಂಭೀರವಾಗಿ ಹಲ್ಲೆ ನಡೆಸಲಾಗಿತ್ತು. ಆದರೆ ಪ್ರಕರಣ ಸಂಬಂಧ ಆರೋಪಿಗಳನ್ನು ಬಂಧಿಸದೇ ಹಲ್ಲೆ ನಡೆಸಿದ ಆರೋಪಿಗಳೊಂದಿಗೆ ಸಂಧಾನ ನಡೆಸುವಂತೆ ಒತ್ತಾಯಿಸಿದ ಆರೋಪ ಪೊಲೀಸರು ವಿರುದ್ಧ ಕೇಳಿಬಂದಿತ್ತು.