ನಮ್ಗೆ ಫ್ರೀ ಟಿಕೆಟ್ ಬೇಡ್ವೇಬೇಡ, ದಯವಿಟ್ಟು ಎಣ್ಣೆ ರೇಟು ಇಳಿಸಿ: ಯುವಕ ಮನವಿ


ಬೆಂಗಳೂರು:
 ರಾಜ್ಯಾದ್ಯಂತ ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಇಂದು ಚಾಲನೆ ಸಿಗಲಿದೆ. ಈ ಹಿನ್ನೆಲೆಯಲ್ಲಿ ಯುವಕನೊಬ್ಬ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿಯೊಂದನ್ನು ಮಾಡಿಕೊಂಡಿದ್ದಾನೆ.

ಹೌದು. ಮಹಿಳೆಯರಿಗೆ ಉಚಿತ ಬಸ್ ಓಕೆ. ನಮಗೆ ಫ್ರೀ ಟಿಕೆಟ್ ಬೇಡ್ವೇ ಬೇಡ. ಆದರೆ ಸಿಎಂ ಸಾಹೇಬ್ರೆ ಎಣ್ಣೆ ರೇಟು ಹೆಚ್ಚು ಮಾಡಿದ್ದು ಸರಿಯಲ್ಲ. ಹೀಗಾಗಿ ದಯವಿಟ್ಟು ಎಣ್ಣೆ ರೇಟು ಇಳಿಸಿ ಎಂದು ಮನವಿ ಮಾಡಿಕೊಂಡಿದ್ದಾನೆ.

ಮದ್ಯದ ದರದಲ್ಲಿ ಏರಿಕೆ: ಅಬಕಾರಿ ಇಲಾಖೆ ಸದ್ದಿಲ್ಲದೆ ಮದ್ಯ ಬೆಲೆ ಏರಿಕೆ ಮಾಡಿದೆ. ಸ್ಲಾಬ್‍ಗಳಲ್ಲಿ ಏರಿಕೆ ಮಾಡಲಾಗಿದ್ದು, ಬಿಯರ್‍ಗೆ 10 ರೂ. ಏರಿಕೆ ಮಾಡಲಾಗಿದೆ. ಹಾಗೂ ಹಾಟ್ ಡ್ರಿಂಕ್ಸ್ ಗಳ ವಿವಿಧ ಬ್ರ್ಯಾಂಡ್‍ಗಳಿಗೆ ಬೇರೆ ಬೇರೆ ರೀತಿಯಾಗಿ ಬೆಲೆ ಏರಿಕೆ ಮಾಡಲಾಗಿದೆ.