“ಶಕ್ತಿ” ಯೋಜನೆಗೆ ಚಾಲನೆ..

ಕುಮಟಾ:- “ವಾಗ್ಧಾನ ನೀಡುವುದು ಸುಲಭ, ಅದರಂತೆ ನಡೆಯುವುದು ಕಷ್ಟ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಕೇವಲ ಒಂದು ತಿಂಗಳಲ್ಲಿ ವಾಗ್ಧಾನ ನೀಡಿದಂತೆ, ಮಹಿಳೆಯರಿಗೆ ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿದೆ.. ಇದು ಶ್ಲಾಘನೀಯ..” ಎಂದು ಕುಮಟಾ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀಯುತ ದಿನಕರ ಶೆಟ್ಟಿ ಹೇಳಿದರು.

ಅವರು ಇಂದು ಕುಮಟಾ ಬಸ್ ನಿಲ್ದಾಣದಲ್ಲಿ ಆಯೋಜಿಸಲಾಗಿದ್ದ ‘ಶಕ್ತಿ’ಯೋಜನೆ ಚಾಲನೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.. ಕುಮಟಾ ತಾಲೂಕಿನ ತಹಶೀಲ್ದಾರರು ಹಾಗೂ ಕುಮಟಾ ಘಟಕದ ವ್ಯವಸ್ಥಾಪಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಇಂದು ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ವಿದ್ಯುಕ್ತವಾಗಿ ಚಾಲನೆ ದೊರೆಯಿತು..