ಕಾಂಗ್ರೆಸ್‌ ಗ್ಯಾರಂಟಿಗೆ ಚಾಲನೆ ಕೊಟ್ಟ ಬಿಜೆಪಿ ಶಾಸಕ: ಉಚಿತ ಬಸ್‌ ಟಿಕೆಟ್ ವಿತರಣೆ

ಶಿವಮೊಗ್ಗ (ಜೂ.11): ರಾಜ್ಯದ ವಿಧಾನಸಭಾ ಚುನಾವಣೆಯ ವೇಳೆ ಕಾಂಗ್ರೆಸ್‌ ಗ್ಯಾರಂಟಿ ಘೋಷಣೆಗಳನ್ನು ಟೀಕೆ ಮಾಡಿದ್ದ ಬಿಜೆಪಿ ನಾಯಕರ ಭದ್ರಕೋಟೆ ಶಿವಮೊಗ್ಗದಲ್ಲಿಯೇ ಬಿಜೆಪಿ ಶಾಸಕ ಎಸ್.ಎನ್. ಚನ್ನಬಸಪ್ಪ ಅವರು ಚಾಲನೆ ನೀಡಿದರು.

ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್‌ 5 ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ಚುನಾವಣೆಯನ್ನು ಎದುರಿಸಿತ್ತು. ಆದರೆ, ಈ ಗ್ಯಾರಂಟಿ ಯೋಜನೆಗಳು ಕೇವಲ ಘೋಷಣೆಗಳಿಗಷ್ಟೇ ಸೀಮಿತವಾಗಲಿದ್ದು, ಅವರು ಅಧಿಕಾರಕ್ಕೆ ಬರುವುದೇ ಇಲ್ಲ ಎಂದು ಬಿಜೆಪಿ ನಾಯಕರು ಟೀಕೆ ಮಾಡುತ್ತಿದ್ದರು. ಹೀಗೆ, ಕಾಂಗ್ರೆಸ್‌ ಗ್ಯಾರಂಟಿಗಳನ್ನು ಸುಳ್ಳು ಭರವಸೆ ಎಂದು ಟೀಕೆ ಮಾಡಿದ್ದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ತವರು ಜಿಲ್ಲೆ ಶಿವಮೊಗ್ಗದಲ್ಲಿ ಈಗ ಬಿಜೆಪಿ ಶಾಸಕ ಎಸ್.ಎನ್. ಚನ್ನಬಸಪ್ಪ ಅವರೇ ಸ್ವತಃ ಕಾಂಗ್ರೆಸ್‌ ಮೊದಲ ಗ್ಯಾರಂಟಿಯಾದ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣದ ಶಕ್ತಿ ಯೋಜನೆಗೆ ಚಾಲನೆ ನೀಡಿದ್ದಾರೆ.